Advertisement
MIRROR FOCUS

ಮಹಿಳೆಯರಿಗೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ | ರಾಜ್ಯ ಸರ್ಕಾರ ಆದೇಶ

Share

ರಾಜ್ಯದ ಕಾಂಗ್ರೆಸ್‌ ಸರಕಾರ(Congress Govt) ಮಹಿಳೆಯರಿಗೆ(Women) ಗುಡ್ ನ್ಯೂಸ್ ಕೊಟ್ಟಿದ್ದು, ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್(Adhar Card) ತೋರಿಸಿದರೂ ಸಾಕು ಉಚಿತವಾಗಿ ಪ್ರಯಾಣಿಸಬಹುದಾಗಿದೆ (Free Bus). ಈ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.

ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಿದ್ದು ಹಾಗೂ ಮುಂದುವರೆದ ಉಲ್ಲೇಖಿತ ಪತ್ರ-ತಿರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಲಾಕರ್ (Digilocker) ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಲಾಗಿರುತ್ತದೆ ಎಂದು ಸರಕಾರದ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.

ಕೆಲವು ನಿರ್ವಾಹಕರು ಮೊಬೈಲಲ್ಲಿ ಇದ್ದರೆ ಸಾಲದು ಎಂದು ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವುದಾಗಿ, ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಉಲ್ಲೇಖ-4 ರ ಪತ್ರದಲ್ಲಿ ಸೂಚಿಸಲಾಗಿದೆ.

The Congress Govt of the state has given good news to women, from now on they can travel for free by showing Adhar Card on their mobile phones. An order has been issued in this regard.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

32 minutes ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

5 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

6 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

16 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

16 hours ago