Advertisement
MIRROR FOCUS

ಮಹಿಳೆಯರಿಗೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ | ರಾಜ್ಯ ಸರ್ಕಾರ ಆದೇಶ

Share

ರಾಜ್ಯದ ಕಾಂಗ್ರೆಸ್‌ ಸರಕಾರ(Congress Govt) ಮಹಿಳೆಯರಿಗೆ(Women) ಗುಡ್ ನ್ಯೂಸ್ ಕೊಟ್ಟಿದ್ದು, ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್(Adhar Card) ತೋರಿಸಿದರೂ ಸಾಕು ಉಚಿತವಾಗಿ ಪ್ರಯಾಣಿಸಬಹುದಾಗಿದೆ (Free Bus). ಈ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.

ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಿದ್ದು ಹಾಗೂ ಮುಂದುವರೆದ ಉಲ್ಲೇಖಿತ ಪತ್ರ-ತಿರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಲಾಕರ್ (Digilocker) ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಲಾಗಿರುತ್ತದೆ ಎಂದು ಸರಕಾರದ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.

ಕೆಲವು ನಿರ್ವಾಹಕರು ಮೊಬೈಲಲ್ಲಿ ಇದ್ದರೆ ಸಾಲದು ಎಂದು ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವುದಾಗಿ, ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಉಲ್ಲೇಖ-4 ರ ಪತ್ರದಲ್ಲಿ ಸೂಚಿಸಲಾಗಿದೆ.

The Congress Govt of the state has given good news to women, from now on they can travel for free by showing Adhar Card on their mobile phones. An order has been issued in this regard.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

23 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago