ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 3ನೇ ಸುತ್ತಿನ ಎರಡನೇ ಹಂತದ ಕಂದು ರೋಗ ಲಸಿಕಾ ಕಾರ್ಯಕ್ರಮ ಜನವರಿ 10 ರಿಂದ 25 ರವರೆಗೆ ದಕ ಜಿಲ್ಲೆಯಾದ್ಯಂತ ದನ ಮತ್ತು ಎಮ್ಮೆಗಳ ಹೆಣ್ಣು ಕರುಗಳಿಗೆ ಮಾತ್ರ ಉಚಿತವಾಗಿ ಹಮ್ಮಿಕೊಳ್ಳಲಾಗಿದೆ.
ಲಸಿಕೆಯನ್ನು ಕರುಗಳಿಗೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ನೀಡಬೇಕು. ಕಂದು ರೋಗವು ಬ್ಯಾಕ್ಟೀರಿಯಾದಿಂದ ಹರಡುವ ರೋಗವಾಗಿದ್ದು ಜಾನುವಾರುಗಳಲ್ಲಿ ಜ್ವರ, ಗರ್ಭಪಾತ, ಗರ್ಭಧಾರಣೆ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇದು ಪ್ರಾಣಿಜನ್ಯ ರೋಗವಾಗಿದ್ದು ಮನುಷ್ಯರಿಗೂ ಹರಡಬಹುದಾಗಿದೆ ಇದರ ಚಿಕಿತ್ಸೆ ದುಬಾರಿ ಮತ್ತು ತ್ರಾಸದಾಯಕವಾಗಿದ್ದು, ಒಟ್ಟಾರೆ ರೈತರಿಗೆ ತುಂಬಾ ಆರ್ಥಿಕ ನಷ್ಟ ಉಂಟು ಮಾಡುತ್ತದೆ. ರೈತ ಬಾಂಧವರು ತಮ್ಮ 4 ರಿಂದ 8 ತಿಂಗಳ ವಯಸ್ಸಿನ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು. ಲಸಿಕೆ ಹಾಕಿಸುವುದೊಂದೇ ಕಂದು ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ.
ಹೆಚ್ಚಿನ ಮಾಹಿತಿಗೆ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಿ ಎಂದು ಮಂಗಳೂರು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…