ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 3ನೇ ಸುತ್ತಿನ ಎರಡನೇ ಹಂತದ ಕಂದು ರೋಗ ಲಸಿಕಾ ಕಾರ್ಯಕ್ರಮ ಜನವರಿ 10 ರಿಂದ 25 ರವರೆಗೆ ದಕ ಜಿಲ್ಲೆಯಾದ್ಯಂತ ದನ ಮತ್ತು ಎಮ್ಮೆಗಳ ಹೆಣ್ಣು ಕರುಗಳಿಗೆ ಮಾತ್ರ ಉಚಿತವಾಗಿ ಹಮ್ಮಿಕೊಳ್ಳಲಾಗಿದೆ.
ಲಸಿಕೆಯನ್ನು ಕರುಗಳಿಗೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ನೀಡಬೇಕು. ಕಂದು ರೋಗವು ಬ್ಯಾಕ್ಟೀರಿಯಾದಿಂದ ಹರಡುವ ರೋಗವಾಗಿದ್ದು ಜಾನುವಾರುಗಳಲ್ಲಿ ಜ್ವರ, ಗರ್ಭಪಾತ, ಗರ್ಭಧಾರಣೆ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇದು ಪ್ರಾಣಿಜನ್ಯ ರೋಗವಾಗಿದ್ದು ಮನುಷ್ಯರಿಗೂ ಹರಡಬಹುದಾಗಿದೆ ಇದರ ಚಿಕಿತ್ಸೆ ದುಬಾರಿ ಮತ್ತು ತ್ರಾಸದಾಯಕವಾಗಿದ್ದು, ಒಟ್ಟಾರೆ ರೈತರಿಗೆ ತುಂಬಾ ಆರ್ಥಿಕ ನಷ್ಟ ಉಂಟು ಮಾಡುತ್ತದೆ. ರೈತ ಬಾಂಧವರು ತಮ್ಮ 4 ರಿಂದ 8 ತಿಂಗಳ ವಯಸ್ಸಿನ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು. ಲಸಿಕೆ ಹಾಕಿಸುವುದೊಂದೇ ಕಂದು ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ.
ಹೆಚ್ಚಿನ ಮಾಹಿತಿಗೆ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಿ ಎಂದು ಮಂಗಳೂರು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…