ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 3ನೇ ಸುತ್ತಿನ ಎರಡನೇ ಹಂತದ ಕಂದು ರೋಗ ಲಸಿಕಾ ಕಾರ್ಯಕ್ರಮ ಜನವರಿ 10 ರಿಂದ 25 ರವರೆಗೆ ದಕ ಜಿಲ್ಲೆಯಾದ್ಯಂತ ದನ ಮತ್ತು ಎಮ್ಮೆಗಳ ಹೆಣ್ಣು ಕರುಗಳಿಗೆ ಮಾತ್ರ ಉಚಿತವಾಗಿ ಹಮ್ಮಿಕೊಳ್ಳಲಾಗಿದೆ.
ಲಸಿಕೆಯನ್ನು ಕರುಗಳಿಗೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ನೀಡಬೇಕು. ಕಂದು ರೋಗವು ಬ್ಯಾಕ್ಟೀರಿಯಾದಿಂದ ಹರಡುವ ರೋಗವಾಗಿದ್ದು ಜಾನುವಾರುಗಳಲ್ಲಿ ಜ್ವರ, ಗರ್ಭಪಾತ, ಗರ್ಭಧಾರಣೆ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇದು ಪ್ರಾಣಿಜನ್ಯ ರೋಗವಾಗಿದ್ದು ಮನುಷ್ಯರಿಗೂ ಹರಡಬಹುದಾಗಿದೆ ಇದರ ಚಿಕಿತ್ಸೆ ದುಬಾರಿ ಮತ್ತು ತ್ರಾಸದಾಯಕವಾಗಿದ್ದು, ಒಟ್ಟಾರೆ ರೈತರಿಗೆ ತುಂಬಾ ಆರ್ಥಿಕ ನಷ್ಟ ಉಂಟು ಮಾಡುತ್ತದೆ. ರೈತ ಬಾಂಧವರು ತಮ್ಮ 4 ರಿಂದ 8 ತಿಂಗಳ ವಯಸ್ಸಿನ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು. ಲಸಿಕೆ ಹಾಕಿಸುವುದೊಂದೇ ಕಂದು ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ.
ಹೆಚ್ಚಿನ ಮಾಹಿತಿಗೆ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಿ ಎಂದು ಮಂಗಳೂರು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…