ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಯೊಂದು ಚೆಂಗಲ್ಪೇಟ್ ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ.
ಗಿರಿಜಾ (63) , ಅವರ ಸಹೋದರಿ ರಾಧಾ (55), ಸಹೋದರ ರಾಜಕುಮಾರ್ (47) ಮೃತಪಟ್ಟವರು.
ಗುಡುವಂಚೇರಿಯಲ್ಲಿರುವ ಆರ್ಆರ್ ಬೃಂದಾವನ ಅಪಾರ್ಟ್ಮೆಂಟ್ನಲ್ಲಿರುವ ದಿ. ವೆಂಕಟರಾಮನ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ.
ದುಬೈನಲ್ಲಿ ನೆಲೆಸಿರುವ ದಿ. ವೆಂಕಟರಾಮನ್ ಅವರ ಪತ್ನಿ ಗಿರಿಜಾ ಸಹಿತ ಕುಟುಂಬದವರು ದಿವಂಗತರಾದ ವೆಂಕಟರಾಮನ್ ಅವರ ವರ್ಷದ ಪೂಜೆ ಹಿನ್ನೆಲೆ ಮನೆಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಗಾಯಾಳುಗಳಾದ ರಾಜ್ಕುಮಾರ್ ಅವರ ಪತ್ನಿ ಭಾರ್ಗವಿ (35) ಮತ್ತು ಅವರ ಪುತ್ರಿ ಆರಾಧನಾ (6) ಅವರನ್ನು ಕ್ರೋಂಪೇಟೆ ಸರ್ಕಾರಿ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟದ ಶಬ್ಧ ಕೇಳಿ ಅಕ್ಕಪಕ್ಕದ ಅಪಾರ್ಟ್ಮೆಂಟ್ನವರು ಓಡಿ ಬಂದಿದ್ದು, ಬಾಗಿಲು ಒಡೆದು ಒಳ ಹೋಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…