ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಯೊಂದು ಚೆಂಗಲ್ಪೇಟ್ ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ.
ಗಿರಿಜಾ (63) , ಅವರ ಸಹೋದರಿ ರಾಧಾ (55), ಸಹೋದರ ರಾಜಕುಮಾರ್ (47) ಮೃತಪಟ್ಟವರು.
ಗುಡುವಂಚೇರಿಯಲ್ಲಿರುವ ಆರ್ಆರ್ ಬೃಂದಾವನ ಅಪಾರ್ಟ್ಮೆಂಟ್ನಲ್ಲಿರುವ ದಿ. ವೆಂಕಟರಾಮನ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ.
ದುಬೈನಲ್ಲಿ ನೆಲೆಸಿರುವ ದಿ. ವೆಂಕಟರಾಮನ್ ಅವರ ಪತ್ನಿ ಗಿರಿಜಾ ಸಹಿತ ಕುಟುಂಬದವರು ದಿವಂಗತರಾದ ವೆಂಕಟರಾಮನ್ ಅವರ ವರ್ಷದ ಪೂಜೆ ಹಿನ್ನೆಲೆ ಮನೆಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಗಾಯಾಳುಗಳಾದ ರಾಜ್ಕುಮಾರ್ ಅವರ ಪತ್ನಿ ಭಾರ್ಗವಿ (35) ಮತ್ತು ಅವರ ಪುತ್ರಿ ಆರಾಧನಾ (6) ಅವರನ್ನು ಕ್ರೋಂಪೇಟೆ ಸರ್ಕಾರಿ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟದ ಶಬ್ಧ ಕೇಳಿ ಅಕ್ಕಪಕ್ಕದ ಅಪಾರ್ಟ್ಮೆಂಟ್ನವರು ಓಡಿ ಬಂದಿದ್ದು, ಬಾಗಿಲು ಒಡೆದು ಒಳ ಹೋಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…