ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಯೊಂದು ಚೆಂಗಲ್ಪೇಟ್ ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ.
ಗಿರಿಜಾ (63) , ಅವರ ಸಹೋದರಿ ರಾಧಾ (55), ಸಹೋದರ ರಾಜಕುಮಾರ್ (47) ಮೃತಪಟ್ಟವರು.
ಗುಡುವಂಚೇರಿಯಲ್ಲಿರುವ ಆರ್ಆರ್ ಬೃಂದಾವನ ಅಪಾರ್ಟ್ಮೆಂಟ್ನಲ್ಲಿರುವ ದಿ. ವೆಂಕಟರಾಮನ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ.
ದುಬೈನಲ್ಲಿ ನೆಲೆಸಿರುವ ದಿ. ವೆಂಕಟರಾಮನ್ ಅವರ ಪತ್ನಿ ಗಿರಿಜಾ ಸಹಿತ ಕುಟುಂಬದವರು ದಿವಂಗತರಾದ ವೆಂಕಟರಾಮನ್ ಅವರ ವರ್ಷದ ಪೂಜೆ ಹಿನ್ನೆಲೆ ಮನೆಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಗಾಯಾಳುಗಳಾದ ರಾಜ್ಕುಮಾರ್ ಅವರ ಪತ್ನಿ ಭಾರ್ಗವಿ (35) ಮತ್ತು ಅವರ ಪುತ್ರಿ ಆರಾಧನಾ (6) ಅವರನ್ನು ಕ್ರೋಂಪೇಟೆ ಸರ್ಕಾರಿ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟದ ಶಬ್ಧ ಕೇಳಿ ಅಕ್ಕಪಕ್ಕದ ಅಪಾರ್ಟ್ಮೆಂಟ್ನವರು ಓಡಿ ಬಂದಿದ್ದು, ಬಾಗಿಲು ಒಡೆದು ಒಳ ಹೋಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…