ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಯೊಂದು ಚೆಂಗಲ್ಪೇಟ್ ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ.
ಗಿರಿಜಾ (63) , ಅವರ ಸಹೋದರಿ ರಾಧಾ (55), ಸಹೋದರ ರಾಜಕುಮಾರ್ (47) ಮೃತಪಟ್ಟವರು.
ಗುಡುವಂಚೇರಿಯಲ್ಲಿರುವ ಆರ್ಆರ್ ಬೃಂದಾವನ ಅಪಾರ್ಟ್ಮೆಂಟ್ನಲ್ಲಿರುವ ದಿ. ವೆಂಕಟರಾಮನ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ.
ದುಬೈನಲ್ಲಿ ನೆಲೆಸಿರುವ ದಿ. ವೆಂಕಟರಾಮನ್ ಅವರ ಪತ್ನಿ ಗಿರಿಜಾ ಸಹಿತ ಕುಟುಂಬದವರು ದಿವಂಗತರಾದ ವೆಂಕಟರಾಮನ್ ಅವರ ವರ್ಷದ ಪೂಜೆ ಹಿನ್ನೆಲೆ ಮನೆಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಗಾಯಾಳುಗಳಾದ ರಾಜ್ಕುಮಾರ್ ಅವರ ಪತ್ನಿ ಭಾರ್ಗವಿ (35) ಮತ್ತು ಅವರ ಪುತ್ರಿ ಆರಾಧನಾ (6) ಅವರನ್ನು ಕ್ರೋಂಪೇಟೆ ಸರ್ಕಾರಿ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟದ ಶಬ್ಧ ಕೇಳಿ ಅಕ್ಕಪಕ್ಕದ ಅಪಾರ್ಟ್ಮೆಂಟ್ನವರು ಓಡಿ ಬಂದಿದ್ದು, ಬಾಗಿಲು ಒಡೆದು ಒಳ ಹೋಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…