ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಯೊಂದು ಚೆಂಗಲ್ಪೇಟ್ ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ.
ಗಿರಿಜಾ (63) , ಅವರ ಸಹೋದರಿ ರಾಧಾ (55), ಸಹೋದರ ರಾಜಕುಮಾರ್ (47) ಮೃತಪಟ್ಟವರು.
ಗುಡುವಂಚೇರಿಯಲ್ಲಿರುವ ಆರ್ಆರ್ ಬೃಂದಾವನ ಅಪಾರ್ಟ್ಮೆಂಟ್ನಲ್ಲಿರುವ ದಿ. ವೆಂಕಟರಾಮನ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ.
ದುಬೈನಲ್ಲಿ ನೆಲೆಸಿರುವ ದಿ. ವೆಂಕಟರಾಮನ್ ಅವರ ಪತ್ನಿ ಗಿರಿಜಾ ಸಹಿತ ಕುಟುಂಬದವರು ದಿವಂಗತರಾದ ವೆಂಕಟರಾಮನ್ ಅವರ ವರ್ಷದ ಪೂಜೆ ಹಿನ್ನೆಲೆ ಮನೆಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಗಾಯಾಳುಗಳಾದ ರಾಜ್ಕುಮಾರ್ ಅವರ ಪತ್ನಿ ಭಾರ್ಗವಿ (35) ಮತ್ತು ಅವರ ಪುತ್ರಿ ಆರಾಧನಾ (6) ಅವರನ್ನು ಕ್ರೋಂಪೇಟೆ ಸರ್ಕಾರಿ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟದ ಶಬ್ಧ ಕೇಳಿ ಅಕ್ಕಪಕ್ಕದ ಅಪಾರ್ಟ್ಮೆಂಟ್ನವರು ಓಡಿ ಬಂದಿದ್ದು, ಬಾಗಿಲು ಒಡೆದು ಒಳ ಹೋಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…