ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಯೊಂದು ಚೆಂಗಲ್ಪೇಟ್ ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ.
ಗಿರಿಜಾ (63) , ಅವರ ಸಹೋದರಿ ರಾಧಾ (55), ಸಹೋದರ ರಾಜಕುಮಾರ್ (47) ಮೃತಪಟ್ಟವರು.
ಗುಡುವಂಚೇರಿಯಲ್ಲಿರುವ ಆರ್ಆರ್ ಬೃಂದಾವನ ಅಪಾರ್ಟ್ಮೆಂಟ್ನಲ್ಲಿರುವ ದಿ. ವೆಂಕಟರಾಮನ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ.
ದುಬೈನಲ್ಲಿ ನೆಲೆಸಿರುವ ದಿ. ವೆಂಕಟರಾಮನ್ ಅವರ ಪತ್ನಿ ಗಿರಿಜಾ ಸಹಿತ ಕುಟುಂಬದವರು ದಿವಂಗತರಾದ ವೆಂಕಟರಾಮನ್ ಅವರ ವರ್ಷದ ಪೂಜೆ ಹಿನ್ನೆಲೆ ಮನೆಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಗಾಯಾಳುಗಳಾದ ರಾಜ್ಕುಮಾರ್ ಅವರ ಪತ್ನಿ ಭಾರ್ಗವಿ (35) ಮತ್ತು ಅವರ ಪುತ್ರಿ ಆರಾಧನಾ (6) ಅವರನ್ನು ಕ್ರೋಂಪೇಟೆ ಸರ್ಕಾರಿ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟದ ಶಬ್ಧ ಕೇಳಿ ಅಕ್ಕಪಕ್ಕದ ಅಪಾರ್ಟ್ಮೆಂಟ್ನವರು ಓಡಿ ಬಂದಿದ್ದು, ಬಾಗಿಲು ಒಡೆದು ಒಳ ಹೋಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…