20.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ತೀರ ಭಾಗಗಳ ತಾಲೂಕುಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.
ಮಧ್ಯಾಹ್ನ ನಂತರ, ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. (ನಕ್ಷೆಯಲ್ಲಿ ಈ ಮುನ್ಸೂಚನೆ ಇಲ್ಲ. ಆದರೆ ತೀರ ಭಾಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲವಾದ್ದರಿಂದ ಮೋಡಗಳು ಘಟ್ಟದ ಕಡೆಗೆ ಚಲಿಸುತ್ತಿವೆ. ಜೊತೆಗೆ ಸ್ಥಳೀಯ ಮೋಡಗಳೂ ಸೇರಿಕೊಳ್ಳುವುದರಿಂದ ಗುಡುಗು ಉಂಟಾಗುತ್ತಿದೆ.)
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 21ರಿಂದ ಮುಂಗಾರು ಚುರುಕಾಗೊಳ್ಳುವ ಲಕ್ಷಣಗಳಿದ್ದು, ಜೂನ್ 22ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಹೆಚ್ಚಿನ ಕಡೆ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 28 ಅಥವಾ ಅಥವಾ 29ರಿಂದ ಮತ್ತೆ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
ಈಗಿನಂತೆ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಎರಡು ದಿನಗಳ ಕಾಲ ಮುಂದಕ್ಕೆ ಹೋಗಿ…
ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ವತಿಯಿಂದ ಪರೀಕ್ಷೆ ನಡೆಸಲಾಗದೇ ಇರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ…
ನಮ್ಮ ಭಾರತೀಯ ಬಾಹ್ಯಾಕಾಶ ಸಂಸ್ಥೆ(ISRO) ಚಂದ್ರಯಾನ -2ರ(Chandrayana-2) ಯಶಸ್ಸಿನ ನಂತರ ದೇಶದ ಮೊದಲ…
ಮುಜಂಟಿ ಜೇನನ್ನು(stingless bee) ಮಿಸಿರಿ ಜೇನು, ಮಸರು ಜೇನು, ರಾಳ ಜೇನು, ಮೂಲಿ…
ಪ್ಲಾಸ್ಟಿಕ್ ಚೀಲಗಳನ್ನು ಬೇಡವೆಂದು ಹೇಳುವ ಮೂಲಕ ಮತ್ತು ಪ್ಲಾಸ್ಟಿಕ್ ಮುಕ್ತ ಬದುಕಿನ ಬಗ್ಗೆ…
ಮಂಡ್ಯದ ಬೇಬಿ ಬೆಟ್ಟದಲ್ಲಿ ಸದ್ದಿಲ್ಲದೇ ಟ್ರಯಲ್ ಬ್ಲಾಸ್ಟ್ಗೆ ಸಿದ್ಧತೆ ನಡೆಸಿದೆ. ಪ್ರಾಯೋಗಿಕ ಪರೀಕ್ಷೆಗೆ…