ಭಾರತದಲ್ಲಿ ಚೀತಾಗಳ ತಳಿ ವಿನಾಶದಂಚಿಗೆ ತಲುಪಿದ್ದ ಕಾರಣ ದಕ್ಷಿಣ ಆಫ್ರೀಕಾದ ನಮೀಬಿಯಾದಿಂದ ಚೀತಾಗಳನ್ನು ತರಲಾಗಿತ್ತು. ಅದರ ಆರೈಕೆಗಾಗಿ ಅವುಗಳನ್ನು ಉದ್ಯಾನವನದಲ್ಲೇ ಇರಿಸಿಕೊಳ್ಳಲಾಗಿತ್ತು. ಇದೀಗ ಒಂದೋಂದೇ ಚೀತಾಗಳನ್ನು ಕಾಡಿಗೆ ಬಿಡುವ ಮೂಲಕ ಅದರ ಮೂಲ ವಾಸಸ್ಥಾನಗಳಲ್ಲಿ ಜೀವಿಸಲು ಅನುವು ಮಾಡಿಕೊಡಲಾಗುತ್ತಿದೆ.
ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿದ್ದ (ಕೆಎನ್ಪಿ) ಇನ್ನೊಂದು ಚೀತಾವನ್ನು ಕಾಡಿಗೆ ಬಿಡಲಾಗಿದ್ದು, ಒಟ್ಟು ಏಳು ಚೀತಾಗಳನ್ನು ಈಗಾಗಲೇ ಕಾಡಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾದ 3-4 ವರ್ಷ ವಯಸ್ಸಿನ ಹೆಣ್ಣು ಚೀತಾ ನೀರವವನ್ನು ಭಾನುವಾರ ಸಂಜೆ ಕೆಎನ್ಪಿಯ ಆವರಣದಿಂದ ಕಾಡಿಗೆ ಬಿಡಲಾಯಿತು ಎಂದು ರಾಷ್ಟ್ರೀಯ ಉದ್ಯಾನವನದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್ಒ) ಪ್ರಕಾಶ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಇಲ್ಲಿಯವರೆಗೆ, ಏಳು ಚೀತಾಗಳನ್ನು ಮುಕ್ತಗೊಳಿಸಲಾಗಿದೆ. ಆದರೆ ಇನ್ನೂ 10 ಚೀತಾಗಳು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇದೆ ಎಂದು ಹೇಳಿದ್ದಾರೆ.
5 ಹೆಣ್ಣು ಮತ್ತು 3 ಗಂಡು ಚೀತಾಗಳನ್ನು ಒಳಗೊಂಡ ಎಂಟು ನಮೀಬಿಯಾದಿಂದ ತರಲಾದ ಚೀತಾಗಳನ್ನು ಕೆಎನ್ಪಿಗೆ ತಂದು ಬಿಡಲಾಗಿತ್ತು, ಈ ಜಾತಿಯ ಚೀತಾಗಳು ಭಾರತದಲ್ಲಿ ನಾಶವಾದ ಕಾರಣ, ಮತ್ತೆ ಇದನ್ನು ಭಾರತದಲ್ಲಿ ಪರಿಚಯಿಸುವ ಕಾರಣದಿಂದ ಕಳೆದ ವರ್ಷ ಸೆಪ್ಟೆಂಬರ್ 17 ಮಹತ್ವದ ಚೀತಾಗಳನ್ನು ಕೆಎನ್ಪಿ ತಂದು ಬಿಡುವ ಕಾರ್ಯಕ್ರಮಗಳನ್ನು ಮಾಡಲಾಗಿತ್ತು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…