ಸುದ್ದಿಗಳು

ಉದ್ಯಾನವನದಿಂದ ಕಾಡು ಸೇರಿದ ಮತ್ತೊಂದು ಚೀತಾ : ಸ್ವಚ್ಛಂದವಾಗಿ ತಿರುಗಾಡಲಿವೆ ಚೀತಾಗಳು

Share

ಭಾರತದಲ್ಲಿ ಚೀತಾಗಳ ತಳಿ ವಿನಾಶದಂಚಿಗೆ ತಲುಪಿದ್ದ ಕಾರಣ ದಕ್ಷಿಣ ಆಫ್ರೀಕಾದ ನಮೀಬಿಯಾದಿಂದ ಚೀತಾಗಳನ್ನು ತರಲಾಗಿತ್ತು. ಅದರ ಆರೈಕೆಗಾಗಿ ಅವುಗಳನ್ನು ಉದ್ಯಾನವನದಲ್ಲೇ ಇರಿಸಿಕೊಳ್ಳಲಾಗಿತ್ತು. ಇದೀಗ ಒಂದೋಂದೇ ಚೀತಾಗಳನ್ನು ಕಾಡಿಗೆ ಬಿಡುವ ಮೂಲಕ ಅದರ ಮೂಲ ವಾಸಸ್ಥಾನಗಳಲ್ಲಿ ಜೀವಿಸಲು ಅನುವು ಮಾಡಿಕೊಡಲಾಗುತ್ತಿದೆ.

ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿದ್ದ (ಕೆಎನ್‌ಪಿ) ಇನ್ನೊಂದು ಚೀತಾವನ್ನು ಕಾಡಿಗೆ ಬಿಡಲಾಗಿದ್ದು, ಒಟ್ಟು ಏಳು ಚೀತಾಗಳನ್ನು ಈಗಾಗಲೇ ಕಾಡಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾದ 3-4 ವರ್ಷ ವಯಸ್ಸಿನ ಹೆಣ್ಣು ಚೀತಾ ನೀರವವನ್ನು ಭಾನುವಾರ ಸಂಜೆ ಕೆಎನ್‌ಪಿಯ ಆವರಣದಿಂದ ಕಾಡಿಗೆ ಬಿಡಲಾಯಿತು ಎಂದು ರಾಷ್ಟ್ರೀಯ ಉದ್ಯಾನವನದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ಪ್ರಕಾಶ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಇಲ್ಲಿಯವರೆಗೆ, ಏಳು ಚೀತಾಗಳನ್ನು ಮುಕ್ತಗೊಳಿಸಲಾಗಿದೆ. ಆದರೆ ಇನ್ನೂ 10 ಚೀತಾಗಳು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇದೆ ಎಂದು ಹೇಳಿದ್ದಾರೆ.

5 ಹೆಣ್ಣು ಮತ್ತು 3 ಗಂಡು ಚೀತಾಗಳನ್ನು ಒಳಗೊಂಡ ಎಂಟು ನಮೀಬಿಯಾದಿಂದ ತರಲಾದ ಚೀತಾಗಳನ್ನು ಕೆಎನ್‌ಪಿಗೆ ತಂದು ಬಿಡಲಾಗಿತ್ತು, ಈ ಜಾತಿಯ ಚೀತಾಗಳು ಭಾರತದಲ್ಲಿ ನಾಶವಾದ ಕಾರಣ, ಮತ್ತೆ ಇದನ್ನು ಭಾರತದಲ್ಲಿ ಪರಿಚಯಿಸುವ ಕಾರಣದಿಂದ ಕಳೆದ ವರ್ಷ ಸೆಪ್ಟೆಂಬರ್ 17 ಮಹತ್ವದ ಚೀತಾಗಳನ್ನು ಕೆಎನ್‌ಪಿ ತಂದು ಬಿಡುವ ಕಾರ್ಯಕ್ರಮಗಳನ್ನು ಮಾಡಲಾಗಿತ್ತು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

50 minutes ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

1 hour ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

1 hour ago

ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…

1 hour ago

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…

1 hour ago

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳ್ಳಿಗದ್ದೆಯ ಶಾಂತಿ ಎಸ್ಟೇಟ್‌ನಲ್ಲಿ ಪುಂಡಾನೆ ಸೆರೆ ಹಿಡಿಯುವಲ್ಲಿ …

2 hours ago