ಭಾರತದಲ್ಲಿ ಚೀತಾಗಳ ತಳಿ ವಿನಾಶದಂಚಿಗೆ ತಲುಪಿದ್ದ ಕಾರಣ ದಕ್ಷಿಣ ಆಫ್ರೀಕಾದ ನಮೀಬಿಯಾದಿಂದ ಚೀತಾಗಳನ್ನು ತರಲಾಗಿತ್ತು. ಅದರ ಆರೈಕೆಗಾಗಿ ಅವುಗಳನ್ನು ಉದ್ಯಾನವನದಲ್ಲೇ ಇರಿಸಿಕೊಳ್ಳಲಾಗಿತ್ತು. ಇದೀಗ ಒಂದೋಂದೇ ಚೀತಾಗಳನ್ನು ಕಾಡಿಗೆ ಬಿಡುವ ಮೂಲಕ ಅದರ ಮೂಲ ವಾಸಸ್ಥಾನಗಳಲ್ಲಿ ಜೀವಿಸಲು ಅನುವು ಮಾಡಿಕೊಡಲಾಗುತ್ತಿದೆ.
ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿದ್ದ (ಕೆಎನ್ಪಿ) ಇನ್ನೊಂದು ಚೀತಾವನ್ನು ಕಾಡಿಗೆ ಬಿಡಲಾಗಿದ್ದು, ಒಟ್ಟು ಏಳು ಚೀತಾಗಳನ್ನು ಈಗಾಗಲೇ ಕಾಡಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾದ 3-4 ವರ್ಷ ವಯಸ್ಸಿನ ಹೆಣ್ಣು ಚೀತಾ ನೀರವವನ್ನು ಭಾನುವಾರ ಸಂಜೆ ಕೆಎನ್ಪಿಯ ಆವರಣದಿಂದ ಕಾಡಿಗೆ ಬಿಡಲಾಯಿತು ಎಂದು ರಾಷ್ಟ್ರೀಯ ಉದ್ಯಾನವನದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್ಒ) ಪ್ರಕಾಶ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಇಲ್ಲಿಯವರೆಗೆ, ಏಳು ಚೀತಾಗಳನ್ನು ಮುಕ್ತಗೊಳಿಸಲಾಗಿದೆ. ಆದರೆ ಇನ್ನೂ 10 ಚೀತಾಗಳು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇದೆ ಎಂದು ಹೇಳಿದ್ದಾರೆ.
5 ಹೆಣ್ಣು ಮತ್ತು 3 ಗಂಡು ಚೀತಾಗಳನ್ನು ಒಳಗೊಂಡ ಎಂಟು ನಮೀಬಿಯಾದಿಂದ ತರಲಾದ ಚೀತಾಗಳನ್ನು ಕೆಎನ್ಪಿಗೆ ತಂದು ಬಿಡಲಾಗಿತ್ತು, ಈ ಜಾತಿಯ ಚೀತಾಗಳು ಭಾರತದಲ್ಲಿ ನಾಶವಾದ ಕಾರಣ, ಮತ್ತೆ ಇದನ್ನು ಭಾರತದಲ್ಲಿ ಪರಿಚಯಿಸುವ ಕಾರಣದಿಂದ ಕಳೆದ ವರ್ಷ ಸೆಪ್ಟೆಂಬರ್ 17 ಮಹತ್ವದ ಚೀತಾಗಳನ್ನು ಕೆಎನ್ಪಿ ತಂದು ಬಿಡುವ ಕಾರ್ಯಕ್ರಮಗಳನ್ನು ಮಾಡಲಾಗಿತ್ತು.
ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…
ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…
ಸಾಗರದ ರಾಘವೇಶ್ವರ ಸಭಾ ಭವನದಲ್ಲಿ ಸೆ. 22ರಿಂದ ಆರಂಭಗೊಳ್ಳುವ ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ…
22.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಮಹಾಲಯ ಅಮಾವಾಸ್ಯೆ (ಪಿತೃ ಅಮಾವಾಸ್ಯೆ) ಹಿಂದೂ ಧಾರ್ಮಿಕ ಸಂಪ್ರದಾಯದಲ್ಲಿ ಪಿತೃಗಳಿಗೆ ತರ್ಪಣ, ಶ್ರಾದ್ಧ,…
ಸಾಧಕನು ಮಾತನಾಡುವುದಿಲ್ಲ. ಆತನ ಸಾಧನೆ ಮಾತನಾಡುತ್ತದೆ, ಮಾತನಾಡುತ್ತಿತ್ತು. ನಮ್ಮ ಹಿರಿಯರನೇಕರು ಈ ಹಾದಿಯಲ್ಲಿ…