Advertisement
ಸುದ್ದಿಗಳು

ಉದ್ಯಾನವನದಿಂದ ಕಾಡು ಸೇರಿದ ಮತ್ತೊಂದು ಚೀತಾ : ಸ್ವಚ್ಛಂದವಾಗಿ ತಿರುಗಾಡಲಿವೆ ಚೀತಾಗಳು

Share

ಭಾರತದಲ್ಲಿ ಚೀತಾಗಳ ತಳಿ ವಿನಾಶದಂಚಿಗೆ ತಲುಪಿದ್ದ ಕಾರಣ ದಕ್ಷಿಣ ಆಫ್ರೀಕಾದ ನಮೀಬಿಯಾದಿಂದ ಚೀತಾಗಳನ್ನು ತರಲಾಗಿತ್ತು. ಅದರ ಆರೈಕೆಗಾಗಿ ಅವುಗಳನ್ನು ಉದ್ಯಾನವನದಲ್ಲೇ ಇರಿಸಿಕೊಳ್ಳಲಾಗಿತ್ತು. ಇದೀಗ ಒಂದೋಂದೇ ಚೀತಾಗಳನ್ನು ಕಾಡಿಗೆ ಬಿಡುವ ಮೂಲಕ ಅದರ ಮೂಲ ವಾಸಸ್ಥಾನಗಳಲ್ಲಿ ಜೀವಿಸಲು ಅನುವು ಮಾಡಿಕೊಡಲಾಗುತ್ತಿದೆ.

ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿದ್ದ (ಕೆಎನ್‌ಪಿ) ಇನ್ನೊಂದು ಚೀತಾವನ್ನು ಕಾಡಿಗೆ ಬಿಡಲಾಗಿದ್ದು, ಒಟ್ಟು ಏಳು ಚೀತಾಗಳನ್ನು ಈಗಾಗಲೇ ಕಾಡಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾದ 3-4 ವರ್ಷ ವಯಸ್ಸಿನ ಹೆಣ್ಣು ಚೀತಾ ನೀರವವನ್ನು ಭಾನುವಾರ ಸಂಜೆ ಕೆಎನ್‌ಪಿಯ ಆವರಣದಿಂದ ಕಾಡಿಗೆ ಬಿಡಲಾಯಿತು ಎಂದು ರಾಷ್ಟ್ರೀಯ ಉದ್ಯಾನವನದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ಪ್ರಕಾಶ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಇಲ್ಲಿಯವರೆಗೆ, ಏಳು ಚೀತಾಗಳನ್ನು ಮುಕ್ತಗೊಳಿಸಲಾಗಿದೆ. ಆದರೆ ಇನ್ನೂ 10 ಚೀತಾಗಳು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇದೆ ಎಂದು ಹೇಳಿದ್ದಾರೆ.

5 ಹೆಣ್ಣು ಮತ್ತು 3 ಗಂಡು ಚೀತಾಗಳನ್ನು ಒಳಗೊಂಡ ಎಂಟು ನಮೀಬಿಯಾದಿಂದ ತರಲಾದ ಚೀತಾಗಳನ್ನು ಕೆಎನ್‌ಪಿಗೆ ತಂದು ಬಿಡಲಾಗಿತ್ತು, ಈ ಜಾತಿಯ ಚೀತಾಗಳು ಭಾರತದಲ್ಲಿ ನಾಶವಾದ ಕಾರಣ, ಮತ್ತೆ ಇದನ್ನು ಭಾರತದಲ್ಲಿ ಪರಿಚಯಿಸುವ ಕಾರಣದಿಂದ ಕಳೆದ ವರ್ಷ ಸೆಪ್ಟೆಂಬರ್ 17 ಮಹತ್ವದ ಚೀತಾಗಳನ್ನು ಕೆಎನ್‌ಪಿ ತಂದು ಬಿಡುವ ಕಾರ್ಯಕ್ರಮಗಳನ್ನು ಮಾಡಲಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

6 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

16 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago