ಹವಾಮಾನ ವರದಿ | 21-09-2024 | ನಾಳೆಯಿಂದ ಮಳೆ ಜಾಸ್ತಿಯಾಗುವ ನಿರೀಕ್ಷೆ |

September 21, 2024
11:04 AM
ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ 6 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.

22.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :…..ಮುಂದೆ ಓದಿ….

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ 6 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Advertisement

ಮಲೆನಾಡು : ಕೊಡಗು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಇರಬಹುದು. ಹಾಸನ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ 22ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿದ್ದು, ಮುಂದಿನ 4 ಅಥವಾ 5 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ. ಈಗಿನಂತೆ ಸೆಪ್ಟೆಂಬರ್ 22ರಿಂದ 25ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಭಿವೃದ್ಧಿಯಾಗದ ಎರಡು ತಾಲೂಕು ಸಂಪರ್ಕದ ಗ್ರಾಮೀಣ ರಸ್ತೆ | ಪ್ರಧಾನಿ ಕಚೇರಿವರೆಗೂ ತಲಪಿತ್ತು ಬೇಡಿಕೆ | ನೂತನ ಸಂಸದರಿಗೂ ಮನವಿ |
September 21, 2024
12:26 PM
by: ದ ರೂರಲ್ ಮಿರರ್.ಕಾಂ
ವಿಶ್ವ ಬಿದಿರು ದಿನವನ್ನು ಆಚರಿಸಿದ ನಾಗಾಲ್ಯಾಂಡ್‌ | ಬಿದಿರು ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದ ನಾಗಾಲ್ಯಾಂಡ್‌ |
September 20, 2024
9:22 PM
by: ದ ರೂರಲ್ ಮಿರರ್.ಕಾಂ
ರೈತರಿಗೆ ₹ 21,000 ಕೋಟಿ ನೆರವು | 100 ಹೊಸ ಕೃಷಿ ವಿಧಾನಗಳ ಅಭಿವೃದ್ಧಿ |
September 20, 2024
8:58 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |
September 20, 2024
8:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror