Opinion

Soil Vasu ಅವರ ಫೇಸ್ಬುಕ್ ಪೇಜ್‌ನಿಂದ | ಪಶ್ಚಿಮ ಘಟ್ಟಗಳ ಕುರಿತ ಅಪೂರ್ವ ಪುಸ್ತಕ |

Share

ಪಶ್ಚಿಮ ಘಟ್ಟಗಳ(Western Ghats) ಕುರಿತಂತೆ ಗೆಳೆಯ ಮಾಧವ ಐತಾಳ್ ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದ ಮಾಡಿರುವ ಋತ ಸರಣಿಯ “ವೈವಿಧ್ಯದ ತೊಟ್ಟಿಲು” ಎಂಬ ಪುಸ್ತಕ(Book) ಓದಿ ದಿಗ್ಮೂಢನಾಗಿ ಕುಳಿತಿದ್ದೇನೆ. ನಮ್ಮ ಕಣ್ಣಳತೆಗೆ ಕಾಣುವ ಬಂಡೀಪುರ(Bandipura), ಗೋಪಾಲಸ್ವಾಮಿ ಬೆಟ್ಟ(Gopalaswami Betta), ಬಿಳಿಗಿರಿರಂಗನ ಬೆಟ್ಟ(Biligirirangana Betta), ಮಧು ಮಲೈ, ನೀಲಗಿರಿ ಇದೆಲ್ಲಾ ಕೂಡ ಪಶ್ಚಿಮ ಘಟ್ಟಗಳ ಸಾಲಿಗೆ ಸೇರಿವೆ. ಹಾಗಾಗಿ ಕುತೂಹಲದಿಂದ ನಾನು ಪಶ್ಚಿಮ ಘಟ್ಟಗಳ ಕುರಿತಂತೆ ಮಾಹಿತಿಗಾಗಿ ಒಂದಷ್ಟು ಓದುತ್ತಾ ಕುಳಿತೆ.

Advertisement

ಅಭಿವೃದ್ಧಿಯ ಹೆಸರಲ್ಲಿ ಪರಿಸರದ ಮೇಲೆ ನಡೆಯುವ ಕ್ರೌರ್ಯ, ಅಟ್ಟಹಾಸ ಹೇಗೆ ಕೋಟ್ಯಾಂತರ ಜೀವಿಗಳ ವಿನಾಶಕ್ಕೆ ಕಾರಣವಾಗುತ್ತದೆ. ಪ್ರಕೃತಿ ವಿಕೋಪಕ್ಕೆ ಮುನ್ನುಡಿ ಬರೆಯುತ್ತದೆ ಎನ್ನುವುದನ್ನು ಮಾಧವ ಗಾಡ್ಗೀಳ್, ವಂದನಾ ಶಿವ, ಪಾಂಡುರಂಗ ಹೆಗಡೆ ಸೇರಿದಂತೆ ಪರಿಸರ ತಜ್ಞರ ಲೇಖನಗಳು ಮನಮುಟ್ಟುವಂತೆ ಹೇಳುತ್ತವೆ. ಮಾಧವ ಗಾಡ್ಗೀಳ್ ವರದಿಯನ್ನು ಜಾರಿಗೆ ತರಲು ಹಿಂದೇಟು ಹಾಕಿದ ರಾಜಕಾರಣಿಗಳು ಅದಕ್ಕಾಗಿ ಮತ್ತೆ ಕಸ್ತೂರಿ ರಂಗನ್ ವರದಿ ತಯಾರಿಸಿ ಹೇಗೆ ಪಶ್ಚಿಮ ಘಟ್ಟಗಳ ವಿನಾಶಕ್ಕೆ ಮುಂದಾಗಿದ್ದಾರೆ ಎನ್ನುವುದನ್ನು ಇಲ್ಲಿ ವಿವರಿಸಲಾಗಿದೆ.

ಕಳೆದ ಮಳೆಗಾಲದಲ್ಲಿ ಕೇರಳ ಮತ್ತು ಕೊಡಗಿನ ಬ್ರಹ್ಮಗಿರಿ ಬೆಟ್ಟದಲ್ಲಿ ಆದ ಭೀಕರ ಪ್ರಕೃತಿ ವಿಕೋಪಕ್ಕೆ ಪಶ್ಚಿಮ ಘಟ್ಟಗಳ ಮೇಲೆ ನಡೆದ ಮಾನವ ದಾಳಿಯೇ ಕಾರಣ. ಕೇರಳ, ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಹಬ್ಬಿರುವ ಪಶ್ಚಿಮ ಘಟ್ಟಗಳ ನಾಶ ಹೀಗೆ ಮುಂದುವರೆದರೆ ಮನುಕುಲ ಕೂಡಾ ವಿನಾಶದ ಹಂಚಿಗೆ ಬಂದು ನಿಲ್ಲಬೇಕಾಗುತ್ತದೆ.

ಜಗತ್ತಿನ ಎಂಟು ಹಾಟೆಸ್ಟ್ ಹಾಟ್ ಸ್ಪಾಟ್ ಗಳಲ್ಲಿ ಒಂದಾಗಿರುವ ಪಶ್ಚಿಮ ಘಟ್ಟಗಳಲ್ಲಿ 7402 ಹೂ ಬಿಡುವ ಸಸ್ಯಗಳು, 1814 ಹೂ ಬಿಡದ ಸಸ್ಯಗಳು, 508 ಪಕ್ಷಿ ಪ್ರಭೇದಗಳು, 139 ಸಸ್ತನಿಗಳು, 179 ಉಭಯಜೀವಿಗಳು, 290 ತಿಳಿ ನೀರಿನ ಮತ್ಸ್ಯಗಳು, 6000ಕ್ಕೂ ಅಧಿಕ ಕೀಟ ಪ್ರಭೇಧಗಳು ಇವೆ. ಇದರಲ್ಲಿ ಸಾಕಷ್ಟು ನಿರ್ವಂಶದ ಭೀತಿ ಎದುರಿಸುತ್ತಿವೆ. ಕೇರಳದ ಸೈಲೆಂಟ್ ವ್ಯಾಲಿಯಲ್ಲಿ ಅಣೆಕಟ್ಟು ಕಟ್ಟಲು ಮುಂದಾದಾಗ ಪರಿಸರವಾದಿಗಳ ವಿರೋಧಕ್ಕೆ ಮಣಿದು ಪ್ರಧಾನಿ ಇಂದಿರಾಗಾಂಧಿ ಯೋಜನೆ ಜಾರಿಯಿಂದ ಹಿಂದೆ ಸರಿದಿದ್ದರು. ಅಂದಿನಿಂದ ಪಶ್ಚಿಮ ಘಟ್ಟಗಳ ಉಳಿಸಿ ಹೋರಾಟ ಪ್ರಬಲವಾಯಿತು. ಸುಂದರಲಾಲ್ ಬಹುಗುಣ, ಮೇಧಾ‌ಪಾಟ್ಕರ್, ಶಿವರಾಮ ಕಾರಂತ, ಪಾಂಡುರಂಗ ಹೆಗಡೆ ಮುಂತಾದ ಪರಿಸರವಾದಿಗಳು ಪಶ್ಚಿಮ ಘಟ್ಟಗಳ ಪರನಿಂತರು.

ಹುಲಿ, ಆನೆ, ಕಾಳಿಂಗ ಸರ್ಪ, ಕಪ್ಪೆಗಳು ಸೇರಿದಂತೆ ಅನೇಕ ಜೀವಿಗಳ ಆವಾಸ ಸ್ಥಾನವಾಗಿರುವ ಪಶ್ಚಿಮ ಘಟ್ಟಗಳ ಬಗ್ಗೆ ಅರಿತು ಕೊಳ್ಳಲು ಈ ಪುಸ್ತಕ ಕೈದೀವಿಗೆಯಾಗಿದೆ. ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ದಶಕಗಳಿಂದ ತೊಡಗಿಸಿಕೊಂಡಿರುವ ವಿಜ್ಞಾನಿಗಳು \ಹೋರಾಟಗಾರರು ಬರೆದಿರುವ ಈ ಪುಸ್ತಕ ಮುಂದೆ ಬರುವ ಜನಾಂದೋಲನಗಳಿಗೆ ದಾರಿ ದೀಪವಾಗಿ ಕೆಲಸಮಾಡಲಿದೆ. ಈ ಪುಸ್ತಕ ಓದುತ್ತಿರುವಾಗ ಯು.ಆರ್.ಅನಂತಮೂರ್ತಿ ಅವರ ಪೂರ್ವ ಪರದಲ್ಲಿನ ಮೊದಲ ಲೇಖನ ಮೌನ ಕಣಿವೆ, ಲಂಕೇಶ್ ಟೀಕೆ ಟಿಪ್ಪಣಿ ಯಲ್ಲಿರುವ ಮರ ಅಪ್ಪಿಕೊಂಡವರು, ಹಿಡಿದ ಕೊಡಲಿಯ ಹಿಂದೆ ಎಂಬ ಲೇಖನಗಳು ನೆನಪಾದವು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

17 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

18 hours ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

18 hours ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

19 hours ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

19 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

19 hours ago