#BengaluruKambala | ಕರಾವಳಿಯಿಂದ ಬೆಂಗಳೂರಿಗೆ ತುಳುನಾಡ ವೈಭವ | ರಾಜಧಾನಿಯಲ್ಲಿ ನಡೆಯಲಿರುವ ಕಂಬಳಕ್ಕೆ ಭರ್ಜರಿ ತಯಾರಿ | ಪಕ್ಷಾತೀತವಾಗಿ ಅದ್ಧೂರಿಯಾಗಿ ನಡೆಯಿತು ಕರೆ ಪೂಜೆ |

October 11, 2023
2:27 PM
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ ನೆರವೇರಿತು. ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಕಂಬಳಕ್ಕೆ ಅದರದೇ ಆದ ರೀತಿ ನೀತಿ, ಕ್ರಮಗಳು ಇದ್ದು ಅದರಲ್ಲಿ ಪ್ರಮುಖವಾದುದು ಕರೆ ಪೂಜೆ.ಕರೆ ಪೂಜೆ ನಡೆದ ಬಳಿಕ ನಿರಂತರವಾಗಿ ವೇಗದಿಂದ ಕಂಬಳದ ಕೆಲಸ ಕಾರ್ಯಗಳು ನಡೆಯಲಿದ್ದು, ಮುಂದಿನ 25 ದಿನಗಳಲ್ಲಿ ಕಂಬಳದ ಕೋಣಗಳು ಓಡುವ ಕರೆಗಳು ಸೇರಿದಂತೆ ಎಲ್ಲಾ ತಯಾರಿಗಳು ವೇಗ ಪಡೆಯಲಿದೆ.

ಕಂಬಳ ತುಳುನಾಡಿನ ಜಾನಪದ ಕ್ರೀಡೆ. ಇತ್ತೀಚಿನ ಕೆಲ ವರ್ಷಗಳಲ್ಲಂತೂ ಕರಾವಳಿಯ ಗಡಿಯನ್ನೂ ಮೀರಿ ದೇಶ ವಿದೇಶ ಕಂಬಳ ತನ್ನ ಪ್ರಖ್ಯಾತಿಯ ಮೂಲಕ ಸದ್ದು ಮಾಡುತ್ತಿದೆ. ಸುಮಾರು 800 ವರ್ಷಕ್ಕೂ ಹಳೆಯ ಇತಿಹಾಸವನ್ನು ಹೊಂದಿರುವ ಕಂಬಳ ಅಪ್ಪಟ ನೆಲದ ಕ್ರೀಡೆ. ನವೆಂಬರ್‌ನಿಂದ ಏಪ್ರಿಲ್‌ತನಕ ನಡೆಯುವ ಈ ಕ್ರೀಡೆ ಪ್ರತೀ ವಾರಾಂತ್ಯ ಶನಿವಾರ ಬೆಳಗ್ಗೆ ಆರಂಭಗೊಂಡು ಭಾನುವಾರ ಸಂಜೆ ತನಕ ನಡೆಯುತ್ತದೆ. ತುಳುನಾಡಿನ ಮಣ್ಣ ಕಂಪು ಸೂಸುವ ಜಾನಪದ ಕ್ರೀಡೆ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ #Bengaluru ಅದ್ಧೂರಿಯಾಗಿ ನಡೆಯಲಿದೆ. ಇದೇ ಬರುವ ನವೆಂಬರ್ 25 ಮತ್ತು 26ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಕಂಬುಲ ನಡೆಯಲಿದ್ದು, ಇದಕ್ಕಾಗಿ ಭರದಿಂದ ಸಿದ್ಧತೆ ನಡೆಯುತ್ತಿದೆ.

ಈ ಹಿನ್ನೆಲೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ ನೆರವೇರಿತು. ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಕಂಬಳಕ್ಕೆ ಅದರದೇ ಆದ ರೀತಿ ನೀತಿ, ಕ್ರಮಗಳು ಇದ್ದು ಅದರಲ್ಲಿ ಪ್ರಮುಖವಾದುದು ಕರೆ ಪೂಜೆ.ಕರೆ ಪೂಜೆ ನಡೆದ ಬಳಿಕ ನಿರಂತರವಾಗಿ ವೇಗದಿಂದ ಕಂಬಳದ ಕೆಲಸ ಕಾರ್ಯಗಳು ನಡೆಯಲಿದ್ದು, ಮುಂದಿನ 25 ದಿನಗಳಲ್ಲಿ ಕಂಬಳದ ಕೋಣಗಳು ಓಡುವ ಕರೆಗಳು ಸೇರಿದಂತೆ ಎಲ್ಲಾ ತಯಾರಿಗಳು ವೇಗ ಪಡೆಯಲಿದೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಂಬಳದ ಕರೆ ಪೂಜೆಯಲ್ಲಿ ಅನೇಕ ರಾಜಕೀಯ ನಾಯಕರು ಭಾಗಿಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror