#BengaluruKambala | ಕರಾವಳಿಯಿಂದ ಬೆಂಗಳೂರಿಗೆ ತುಳುನಾಡ ವೈಭವ | ರಾಜಧಾನಿಯಲ್ಲಿ ನಡೆಯಲಿರುವ ಕಂಬಳಕ್ಕೆ ಭರ್ಜರಿ ತಯಾರಿ | ಪಕ್ಷಾತೀತವಾಗಿ ಅದ್ಧೂರಿಯಾಗಿ ನಡೆಯಿತು ಕರೆ ಪೂಜೆ |

October 11, 2023
2:27 PM
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ ನೆರವೇರಿತು. ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಕಂಬಳಕ್ಕೆ ಅದರದೇ ಆದ ರೀತಿ ನೀತಿ, ಕ್ರಮಗಳು ಇದ್ದು ಅದರಲ್ಲಿ ಪ್ರಮುಖವಾದುದು ಕರೆ ಪೂಜೆ.ಕರೆ ಪೂಜೆ ನಡೆದ ಬಳಿಕ ನಿರಂತರವಾಗಿ ವೇಗದಿಂದ ಕಂಬಳದ ಕೆಲಸ ಕಾರ್ಯಗಳು ನಡೆಯಲಿದ್ದು, ಮುಂದಿನ 25 ದಿನಗಳಲ್ಲಿ ಕಂಬಳದ ಕೋಣಗಳು ಓಡುವ ಕರೆಗಳು ಸೇರಿದಂತೆ ಎಲ್ಲಾ ತಯಾರಿಗಳು ವೇಗ ಪಡೆಯಲಿದೆ.

ಕಂಬಳ ತುಳುನಾಡಿನ ಜಾನಪದ ಕ್ರೀಡೆ. ಇತ್ತೀಚಿನ ಕೆಲ ವರ್ಷಗಳಲ್ಲಂತೂ ಕರಾವಳಿಯ ಗಡಿಯನ್ನೂ ಮೀರಿ ದೇಶ ವಿದೇಶ ಕಂಬಳ ತನ್ನ ಪ್ರಖ್ಯಾತಿಯ ಮೂಲಕ ಸದ್ದು ಮಾಡುತ್ತಿದೆ. ಸುಮಾರು 800 ವರ್ಷಕ್ಕೂ ಹಳೆಯ ಇತಿಹಾಸವನ್ನು ಹೊಂದಿರುವ ಕಂಬಳ ಅಪ್ಪಟ ನೆಲದ ಕ್ರೀಡೆ. ನವೆಂಬರ್‌ನಿಂದ ಏಪ್ರಿಲ್‌ತನಕ ನಡೆಯುವ ಈ ಕ್ರೀಡೆ ಪ್ರತೀ ವಾರಾಂತ್ಯ ಶನಿವಾರ ಬೆಳಗ್ಗೆ ಆರಂಭಗೊಂಡು ಭಾನುವಾರ ಸಂಜೆ ತನಕ ನಡೆಯುತ್ತದೆ. ತುಳುನಾಡಿನ ಮಣ್ಣ ಕಂಪು ಸೂಸುವ ಜಾನಪದ ಕ್ರೀಡೆ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ #Bengaluru ಅದ್ಧೂರಿಯಾಗಿ ನಡೆಯಲಿದೆ. ಇದೇ ಬರುವ ನವೆಂಬರ್ 25 ಮತ್ತು 26ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಕಂಬುಲ ನಡೆಯಲಿದ್ದು, ಇದಕ್ಕಾಗಿ ಭರದಿಂದ ಸಿದ್ಧತೆ ನಡೆಯುತ್ತಿದೆ.

ಈ ಹಿನ್ನೆಲೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ ನೆರವೇರಿತು. ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಕಂಬಳಕ್ಕೆ ಅದರದೇ ಆದ ರೀತಿ ನೀತಿ, ಕ್ರಮಗಳು ಇದ್ದು ಅದರಲ್ಲಿ ಪ್ರಮುಖವಾದುದು ಕರೆ ಪೂಜೆ.ಕರೆ ಪೂಜೆ ನಡೆದ ಬಳಿಕ ನಿರಂತರವಾಗಿ ವೇಗದಿಂದ ಕಂಬಳದ ಕೆಲಸ ಕಾರ್ಯಗಳು ನಡೆಯಲಿದ್ದು, ಮುಂದಿನ 25 ದಿನಗಳಲ್ಲಿ ಕಂಬಳದ ಕೋಣಗಳು ಓಡುವ ಕರೆಗಳು ಸೇರಿದಂತೆ ಎಲ್ಲಾ ತಯಾರಿಗಳು ವೇಗ ಪಡೆಯಲಿದೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಂಬಳದ ಕರೆ ಪೂಜೆಯಲ್ಲಿ ಅನೇಕ ರಾಜಕೀಯ ನಾಯಕರು ಭಾಗಿಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror