Advertisement
MIRROR FOCUS

ವರ್ಷಪೂರ್ತಿ ಜನರಿಗೆ ಮಾವು, ಹಲಸು..! | ಆಹಾರ ಭದ್ರತೆಯ ಕಡೆಗೆ ಹೆಜ್ಜೆ | ಹೊಸ ರೀತಿಯ ಹಣ್ಣುಗಳ ಪರಿಚಯಕ್ಕೆ ಇಳಿದ ಬಾಂಗ್ಲಾದೇಶ |

Share

ಆಹಾರ ಭದ್ರತೆ ಎಷ್ಟು ಅಗತ್ಯವೋ ಅಷ್ಟೇ ಅಗತ್ಯವಾಗಿರುವುದು ಪೌಷ್ಟಿಕಾಂಶಯುಕ್ತ  ಆಹಾರವೂ ಅಗತ್ಯ. ಇಂದು ಪ್ರಪಂಚದಲ್ಲಿ ಪೌಪ್ಟಿಕಾಂಶಯುಕ್ತ ಆಹಾರದ ಕಡೆಗೂ ಗಮನ ನೀಡಲಾಗುತ್ತಿದೆ. ಈ ದೃಷ್ಟಿಯಿಂದ ವಿವಿಧ ದೇಶದಲ್ಲಿ ಹಣ್ಣಿನ ಬೆಳೆಗಳ ಕಡೆಗೆ ಗಮನ ನೀಡಲಾಗುತ್ತಿದೆ. ಹೀಗಾಗಿ ಹಣ್ಣುಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಈಗಾಗಲೇ ಹಲವು ದೇಶಗಳಲ್ಲಿ ಹಣ್ಣು ಕೃಷಿಗೆ ಉತ್ತೇಜನ ನೀಡಲಾಗುತ್ತಿದೆ. ಈಚೆಗೆ ಬಾಂಗ್ಲಾದೇಶವೂ ಕೂಡಾ ಹಣ್ಣು ಕೃಷಿಯ ಕಡೆಗೆ ಆದ್ಯತೆ ನೀಡಿದ್ದು ಮುಂದಿನ ಐದು ವರ್ಷಗಳಲ್ಲಿ ಮಾವು ಮತ್ತು ಹಲಸು 365 ದಿನವೂ ಲಭ್ಯವಿರುವಂತೆ ಕಾರ್ಯಯೋಜನೆ ಹಾಕಿಕೊಂಡಿದೆ.

ಹೊಸ ರೀತಿಯ ಹಣ್ಣುಗಳು ಮತ್ತು ಹೊಸ ವಿಧಾನದ ಕೃಷಿ ಬೆಳೆಗಳನ್ನು ಪರಿಚಯಿಸಲು ಬಾಂಗ್ಲಾದೇಶದಲ್ಲಿ ಸರ್ಕಾರವೇ ಕೆಲಸ ಮಾಡುತ್ತಿದೆ.ಹೀಗಾಗಿ ಮುಂದಿನ ದಿನಗಳಲ್ಲಿ ವರ್ಷಪೂರ್ತಿ ಹಲಸು, ಮಾವಿನ ಹಣ್ಣು ಸಹಿತ ವಿವಿಧ ಬಗೆಯ ಹಣ್ಣಿನ ಕೃಷಿಯ ಕಡೆಗೆ ಬಾಂಗ್ಲಾದೇಶವು ಕ್ರಮ ಕೈಗೊಳ್ಳಲಿದೆ. ಈ ಮೂಲಕ ಆಹಾರ ಭದ್ರತೆ ಕಡೆಗೂ ಗಮನ ನೀಡುತ್ತಿದೆ. ಹಣ್ಣಿನ ಕೃಷಿಯ ಭವಿಷ್ಯದ ಬಗ್ಗೆಯೂ ಇದು ಮಹತ್ವದ ಸಂದೇಶ ನೀಡುತ್ತಿದೆ.

ಬಾಂಗ್ಲಾದೇಶದಲ್ಲಿ ಹೊಸ ರೀತಿಯ ಹಣ್ಣುಗಳು ಮತ್ತು ಇತರ ಕೃಷಿ ಬೆಳೆಗಳನ್ನು ಪರಿಚಯಿಸಲು ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಜನರು ವರ್ಷವಿಡೀ ಮಾವು ಮತ್ತು ಹಲಸುಗಳನ್ನು ಪಡೆಯಲಿದ್ದಾರೆ ಎಂದು ಬಾಂಗ್ಲಾದ ಕೃಷಿ ಕಾರ್ಯದರ್ಶಿ ವಹಿದಾ ಅಕ್ಟರ್ ಹೇಳಿದ್ದಾರೆ. ಸರ್ಕಾರವು ದೇಶದಲ್ಲಿ ಆಹಾರ ಭದ್ರತೆ ಮತ್ತು ಹಣ್ಣುಗಳ ಉತ್ಪಾದನೆ ಕಡೆಗೆ ಕೆಲಸ ಮಾಡುತ್ತಿದೆ. ಗುಣಮಟ್ಟದ ಹಣ್ಣು ಹಾಗೂ ಆರೋಗ್ಯದ ಹಿತದೃಷ್ಟಿಯಿಂದಲೂ ಇದು ಅಗತ್ಯವಿದೆ. ಹೀಗಾಗಿ ಹಣ್ಣುಗಳ ಉತ್ಪಾದನೆ ಭವಿಷ್ಯದ ಕೃಷಿಯಲ್ಲಿ ಅಗತ್ಯವಿದೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ.

ಬಾಂಗ್ಲಾದಲ್ಲಿ ದಿನಕ್ಕೆ ಸುಮಾರು 50 ಮಿಲಿಯನ್ ಮೊಟ್ಟೆಗಳು ಮತ್ತು ಸುಮಾರು 2.1 ಮಿಲಿಯನ್ ಟನ್ ಅಕ್ಕಿ ಅಗತ್ಯವಿದೆ. ಅಕ್ಕಿ ಉತ್ಪಾದನೆಯಲ್ಲಿ ಬಾಂಗ್ಲಾದೇಶ ಸ್ವಾವಲಂಬಿಯಾಗಿದೆ. ಆರೋಗ್ಯದ ದೃಷ್ಟಿಯಿಂದ ಹಣ್ಣಿನ ಬೆಳೆಗಳ ಅಗತ್ಯವಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹಣ್ಣಿನ ಉತ್ಪಾದನೆಯೂ ಪೂರ್ಣಗೊಳ್ಳಲಿದೆ. ಮುಂದಿನ ಐದು ವರ್ಷಗಳ ನಂತರ, ಮಾವು ಮತ್ತು ಹಲಸು 365 ದಿನಗಳಲ್ಲಿ ಲಭ್ಯವಿರುತ್ತದೆ ಎಂಬ ವಿಶ್ವಾಸವನ್ನು ಬಾಂಗ್ಲಾದೇಶ ಇರಿಸಿಕೊಂಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

8 minutes ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

1 hour ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

3 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

14 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

15 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

15 hours ago