Advertisement
MIRROR FOCUS

ವರ್ಷಪೂರ್ತಿ ಜನರಿಗೆ ಮಾವು, ಹಲಸು..! | ಆಹಾರ ಭದ್ರತೆಯ ಕಡೆಗೆ ಹೆಜ್ಜೆ | ಹೊಸ ರೀತಿಯ ಹಣ್ಣುಗಳ ಪರಿಚಯಕ್ಕೆ ಇಳಿದ ಬಾಂಗ್ಲಾದೇಶ |

Share

ಆಹಾರ ಭದ್ರತೆ ಎಷ್ಟು ಅಗತ್ಯವೋ ಅಷ್ಟೇ ಅಗತ್ಯವಾಗಿರುವುದು ಪೌಷ್ಟಿಕಾಂಶಯುಕ್ತ  ಆಹಾರವೂ ಅಗತ್ಯ. ಇಂದು ಪ್ರಪಂಚದಲ್ಲಿ ಪೌಪ್ಟಿಕಾಂಶಯುಕ್ತ ಆಹಾರದ ಕಡೆಗೂ ಗಮನ ನೀಡಲಾಗುತ್ತಿದೆ. ಈ ದೃಷ್ಟಿಯಿಂದ ವಿವಿಧ ದೇಶದಲ್ಲಿ ಹಣ್ಣಿನ ಬೆಳೆಗಳ ಕಡೆಗೆ ಗಮನ ನೀಡಲಾಗುತ್ತಿದೆ. ಹೀಗಾಗಿ ಹಣ್ಣುಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಈಗಾಗಲೇ ಹಲವು ದೇಶಗಳಲ್ಲಿ ಹಣ್ಣು ಕೃಷಿಗೆ ಉತ್ತೇಜನ ನೀಡಲಾಗುತ್ತಿದೆ. ಈಚೆಗೆ ಬಾಂಗ್ಲಾದೇಶವೂ ಕೂಡಾ ಹಣ್ಣು ಕೃಷಿಯ ಕಡೆಗೆ ಆದ್ಯತೆ ನೀಡಿದ್ದು ಮುಂದಿನ ಐದು ವರ್ಷಗಳಲ್ಲಿ ಮಾವು ಮತ್ತು ಹಲಸು 365 ದಿನವೂ ಲಭ್ಯವಿರುವಂತೆ ಕಾರ್ಯಯೋಜನೆ ಹಾಕಿಕೊಂಡಿದೆ.

ಹೊಸ ರೀತಿಯ ಹಣ್ಣುಗಳು ಮತ್ತು ಹೊಸ ವಿಧಾನದ ಕೃಷಿ ಬೆಳೆಗಳನ್ನು ಪರಿಚಯಿಸಲು ಬಾಂಗ್ಲಾದೇಶದಲ್ಲಿ ಸರ್ಕಾರವೇ ಕೆಲಸ ಮಾಡುತ್ತಿದೆ.ಹೀಗಾಗಿ ಮುಂದಿನ ದಿನಗಳಲ್ಲಿ ವರ್ಷಪೂರ್ತಿ ಹಲಸು, ಮಾವಿನ ಹಣ್ಣು ಸಹಿತ ವಿವಿಧ ಬಗೆಯ ಹಣ್ಣಿನ ಕೃಷಿಯ ಕಡೆಗೆ ಬಾಂಗ್ಲಾದೇಶವು ಕ್ರಮ ಕೈಗೊಳ್ಳಲಿದೆ. ಈ ಮೂಲಕ ಆಹಾರ ಭದ್ರತೆ ಕಡೆಗೂ ಗಮನ ನೀಡುತ್ತಿದೆ. ಹಣ್ಣಿನ ಕೃಷಿಯ ಭವಿಷ್ಯದ ಬಗ್ಗೆಯೂ ಇದು ಮಹತ್ವದ ಸಂದೇಶ ನೀಡುತ್ತಿದೆ.

ಬಾಂಗ್ಲಾದೇಶದಲ್ಲಿ ಹೊಸ ರೀತಿಯ ಹಣ್ಣುಗಳು ಮತ್ತು ಇತರ ಕೃಷಿ ಬೆಳೆಗಳನ್ನು ಪರಿಚಯಿಸಲು ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಜನರು ವರ್ಷವಿಡೀ ಮಾವು ಮತ್ತು ಹಲಸುಗಳನ್ನು ಪಡೆಯಲಿದ್ದಾರೆ ಎಂದು ಬಾಂಗ್ಲಾದ ಕೃಷಿ ಕಾರ್ಯದರ್ಶಿ ವಹಿದಾ ಅಕ್ಟರ್ ಹೇಳಿದ್ದಾರೆ. ಸರ್ಕಾರವು ದೇಶದಲ್ಲಿ ಆಹಾರ ಭದ್ರತೆ ಮತ್ತು ಹಣ್ಣುಗಳ ಉತ್ಪಾದನೆ ಕಡೆಗೆ ಕೆಲಸ ಮಾಡುತ್ತಿದೆ. ಗುಣಮಟ್ಟದ ಹಣ್ಣು ಹಾಗೂ ಆರೋಗ್ಯದ ಹಿತದೃಷ್ಟಿಯಿಂದಲೂ ಇದು ಅಗತ್ಯವಿದೆ. ಹೀಗಾಗಿ ಹಣ್ಣುಗಳ ಉತ್ಪಾದನೆ ಭವಿಷ್ಯದ ಕೃಷಿಯಲ್ಲಿ ಅಗತ್ಯವಿದೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ.

ಬಾಂಗ್ಲಾದಲ್ಲಿ ದಿನಕ್ಕೆ ಸುಮಾರು 50 ಮಿಲಿಯನ್ ಮೊಟ್ಟೆಗಳು ಮತ್ತು ಸುಮಾರು 2.1 ಮಿಲಿಯನ್ ಟನ್ ಅಕ್ಕಿ ಅಗತ್ಯವಿದೆ. ಅಕ್ಕಿ ಉತ್ಪಾದನೆಯಲ್ಲಿ ಬಾಂಗ್ಲಾದೇಶ ಸ್ವಾವಲಂಬಿಯಾಗಿದೆ. ಆರೋಗ್ಯದ ದೃಷ್ಟಿಯಿಂದ ಹಣ್ಣಿನ ಬೆಳೆಗಳ ಅಗತ್ಯವಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹಣ್ಣಿನ ಉತ್ಪಾದನೆಯೂ ಪೂರ್ಣಗೊಳ್ಳಲಿದೆ. ಮುಂದಿನ ಐದು ವರ್ಷಗಳ ನಂತರ, ಮಾವು ಮತ್ತು ಹಲಸು 365 ದಿನಗಳಲ್ಲಿ ಲಭ್ಯವಿರುತ್ತದೆ ಎಂಬ ವಿಶ್ವಾಸವನ್ನು ಬಾಂಗ್ಲಾದೇಶ ಇರಿಸಿಕೊಂಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

6 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

13 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

23 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

24 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

1 day ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

1 day ago