Advertisement
ಅನುಕ್ರಮ

ಸವಿರುಚಿ | ಆರೋಗ್ಯ ವರ್ಧಕ ಹಣ್ಣುಗಳ ಸಲಾಡ್….

Share
ನಮ್ಮ  ಊರಲ್ಲಿ   ಯಾವುದೇ ವಿಶೇಷ ಸಂದರ್ಭದಲ್ಲಿ  ಮಕ್ಕಳು ಅಪ್ಪ ಅಮ್ಮನಲ್ಲಿ ಡಿಮಾಂಡ್ ಮಾಡಿ ತಿನ್ನುತ್ತಿದ್ದುದು ಗಡ್ ಬಡ್ ಐಸ್ ಕ್ರೀಂ. ಹಣ್ಣುಗಳು ಹಾಗೂ ಐಸ್ ಕ್ರೀಂ ಗಳ  ಅಚ್ಚುಕಟ್ಟಾದ ಮಿಶ್ರಣ ಗಡ್ ಬಡ್.  ಯಾವ ಹೋಟೆಲ್ ಗಳಿಗೆ ಹೋದರು ಮೆನು ಇಡೀ ಓದಿ ಕೊನೆಯಲ್ಲಿ ಕೇಳುವುದು ಇದೇ ಗಡ್ ಬಡ್. ಎಂತ ಮಕ್ಕಳೊ ಏನೋ ಒಳ್ಳೆಯ ಹೋಟೆಲ್ , ಇಲ್ಲಿನ ಬನ್ಸ್ ರುಚಿ, ಮಸಾಲಾ ದೋಸೆ ಸೂಪರ್, ಹಾಗಿದ್ದೂ ಮತ್ತದೇ  ಗಡ್ ಬಡ್.  ಪ್ರತಿ ಹೋಟೆಲ್ ನ ಗಡ್ ಬಡ್ ಬೇರೆ ಬೇರೆಯೇ. ರುಚಿಯಲ್ಲಿ , ಬಣ್ಣದಲ್ಲಿ ಹಣ್ಣು , ಒಣ್ ಹಣ್ಣುಗಳ  ಮಿಶ್ರಣ, ಬಳಸುವ ಐಸ್ ಕ್ರೀಂ ಗಳು  ವಿಭಿನ್ನ ರೀತಿಯಲ್ಲಿರುತ್ತವೆ. ಆದರೆ ಅವುಗಳೆಲ್ಲವೂ  ಗಡ್ ಬಡ್ ಐಸ್ ಕ್ರೀಂ  ಎನ್ನುವುದರಲ್ಲಿ ಸಂಶಯವಿಲ್ಲ.
ನಮ್ಮ ಕರಾವಳಿ ಪ್ರದೇಶದಲ್ಲಿನ ವಾತಾವರಣ ಯಾರನ್ನಾದರೂ ಐಸ್ ಕ್ರೀಂ ಸೇವಿಸಲು ಪ್ರೇರೇಪಿಸುತ್ತದೆ.  ಅಲ್ಲದೇ ಒಂದು ಕಪ್ ತಿಂದರೆ ಇನ್ನೊಂದು ಬೇಕೆನಿಸುವಷ್ಟು ಇಷ್ಟವಾಗಿ ಬಿಡುವಂತಹುದೇ ಆಗಿದೆ ಈ ಐಸ್ ಕ್ರೀಂ .  ಹಾಗಾಗಿ ಇಲ್ಲಿ  ನಿತ್ಯವೂ ಹೊಸ ಹೊಸ  ರುಚಿಯ  , ನವೀನ ಬಣ್ಣ, ಪರಿಮಳಗಳ ಐಸ್ ಕ್ರೀಂ ಗಳ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿರುತ್ತವೆ.
ಸದ್ಯ ಕೊರೋನಾ ಸಮಯದಲ್ಲಿ ತಣ್ಣಗೆ ಏನೂ ತಿನ್ನಬೇಡಿ, ಕುಡಿಯ ಬೇಡಿ ಅಂತ ಎಲ್ಲೆಡೆಯೂ ಕೇಳಿ ಬರುತ್ತಿರುವ ಮಾತು. ಆದರೆ ಏನು ಮಾಡೋಣ, ಮನೆಯಲ್ಲಿ ಮಕ್ಕಳು ಒಂದೇ ಸಮನೆ ಪ್ರುಟ್ ಸಲಾಡ್ ಬೇಕು,  ಬೇಕು ಎಂದು ಬೊಬ್ಬೆ ಹೊಡೆಯುವಾಗ ,  ಮನೆಯಲ್ಲೇ ಇದ್ದ ಹಣ್ಣುಗಳಿಂದಲೇ ವಿಶೇಷವಾಗಿ  ಮಿಶ್ರ ಹಣ್ಣುಗಳ ಸಲಾಡ್ ಮಾಡಿ ಕೊಟ್ಟಾಯಿತು.  ಮಾವಿನ ಹಣ್ಣಿನ ಹೋಳುಗಳು, ಅನನಾಸಿನ ಸಣ್ಣ ಸಣ್ಣ ತುಂಡುಗಳು, ಪಪ್ಪಾಯ, ಒಣದ್ರಾಕ್ಷಿ, ಜೇನು ಬಳಸಿ ಮಾಡಿದ ಫ್ರುಟ್ ಸಲಾಡ್ ಬಹಳ ಇಷ್ಟವಾಗಿ ಇನ್ನೊಮ್ಮೆ ಮಾಡ ಬೇಕೆಂಬ ಬೇಡಿಕೆ ಬಂದಲ್ಲಿಗೆ  ನಮ್ಮ ಮನೆ  ಪಾಕ ಯಶಸ್ವಿಯಾಯಿತು . ನೀವು ಮಾಡಿ ನೋಡಿ!!!!
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

3 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

3 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

13 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

13 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

13 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

14 hours ago