Advertisement
MIRROR FOCUS

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

Share

ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಕೃಷಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ರೈತರು ‘ಫ್ರೂಟ್ಸ್’ (FRUITS) ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ತಿಳಿಸಿದ್ದಾರೆ.

ಬರಪರಿಹಾರ, ಬೆಳೆ ವಿಮೆ ಹಾಗೂ PM-Kisan ಸೇರಿದಂತೆ ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಗಳ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಈ ನೋಂದಣಿ ಅತ್ಯಗತ್ಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬರಪರಿಹಾರ, ಬೆಳೆ ವಿಮೆ, ಪಿ.ಎಂ. ಕಿಸಾನ್ (PM-Kisan) ಯೋಜನೆ ಸೇರಿದಂತೆ ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಗಳ ಸೌಲಭ್ಯಗಳನ್ನು ಪಡೆಯಲು ಈ ನೋಂದಣಿ ಅತ್ಯಗತ್ಯವಾಗಿದೆ. ರೈತರು ತಮ್ಮ ಆಧಾರ್ ಕಾರ್ಡ್ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್ ಪ್ರತಿ ಹಾಗೂ ಎಲ್ಲಾ ಜಮೀನಿನ ಪಹಣಿಗಳೊಂದಿಗೆ (RTC) ಸಮೀಪದ ರೈತ ಸಂಪರ್ಕ ಕೇಂದ್ರ, ಕಂದಾಯ, ತೋಟಗಾರಿಕೆ ಅಥವಾ ರೇಷ್ಮೆ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ‘ಫ್ರೂಟ್ಸ್ ಐಡಿ’ (FRUITS ID) ಪಡೆದುಕೊಳ್ಳಬೇಕು ಎಂದು ಅವರು ವಿವರಿಸಿದರು.  ಒಂದು ವೇಳೆ ರೈತರು ಈ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ, ಭವಿಷ್ಯದಲ್ಲಿ ಸರ್ಕಾರದಿಂದ ಸಿಗುವ ವಿವಿಧ ಆರ್ಥಿಕ ನೆರವು ಮತ್ತು ಇಲಾಖಾವಾರು ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆಯಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ರೈತರು ಕೂಡಲೇ ಈ ತಂತ್ರಾಂಶದಲ್ಲಿ ತಮ್ಮ ವಿವರಗಳನ್ನು ಅಪ್‌ಡೇಟ್ ಮಾಡಿಕೊಳ್ಳುವ ಮೂಲಕ ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

‘FRUITS ID’ ಪಡೆಯಲು ಅಗತ್ಯ ದಾಖಲೆಗಳು

  • ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
  • ಬ್ಯಾಂಕ್ ಪಾಸ್ಬುಕ್ ಪ್ರತಿ
  • ಎಲ್ಲಾ ಜಮೀನಿನ ಪಹಣಿ (RTC) ದಾಖಲೆಗಳು

ರೈತರು ಈ ದಾಖಲೆಗಳೊಂದಿಗೆ ಸಮೀಪದ

  • ರೈತ ಸಂಪರ್ಕ ಕೇಂದ್ರ
  • ಕಂದಾಯ ಇಲಾಖೆ ಕಚೇರಿ
  • ತೋಟಗಾರಿಕೆ ಇಲಾಖೆ
  • ರೇಷ್ಮೆ ಇಲಾಖೆ

ಇವುಗಳನ್ನು ಸಂಪರ್ಕಿಸಿ ತಮ್ಮ ‘FRUITS ID’ ಪಡೆಯಬಹುದು ಎಂದು ಸೂಚಿಸಲಾಗಿದೆ.

Farmers must register their land details in the FRUITS software to avail benefits of state and central government schemes. Joint Director Javeeda Naseema Khanum stated that schemes like PM-Kisan, crop insurance, and drought relief require mandatory FRUITS ID registration. Farmers are advised to complete the process with required documents to avoid missing benefits.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago