Advertisement
MIRROR FOCUS

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

Share

ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಕೃಷಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ರೈತರು ‘ಫ್ರೂಟ್ಸ್’ (FRUITS) ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ತಿಳಿಸಿದ್ದಾರೆ.

ಬರಪರಿಹಾರ, ಬೆಳೆ ವಿಮೆ ಹಾಗೂ PM-Kisan ಸೇರಿದಂತೆ ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಗಳ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಈ ನೋಂದಣಿ ಅತ್ಯಗತ್ಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬರಪರಿಹಾರ, ಬೆಳೆ ವಿಮೆ, ಪಿ.ಎಂ. ಕಿಸಾನ್ (PM-Kisan) ಯೋಜನೆ ಸೇರಿದಂತೆ ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಗಳ ಸೌಲಭ್ಯಗಳನ್ನು ಪಡೆಯಲು ಈ ನೋಂದಣಿ ಅತ್ಯಗತ್ಯವಾಗಿದೆ. ರೈತರು ತಮ್ಮ ಆಧಾರ್ ಕಾರ್ಡ್ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್ ಪ್ರತಿ ಹಾಗೂ ಎಲ್ಲಾ ಜಮೀನಿನ ಪಹಣಿಗಳೊಂದಿಗೆ (RTC) ಸಮೀಪದ ರೈತ ಸಂಪರ್ಕ ಕೇಂದ್ರ, ಕಂದಾಯ, ತೋಟಗಾರಿಕೆ ಅಥವಾ ರೇಷ್ಮೆ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ‘ಫ್ರೂಟ್ಸ್ ಐಡಿ’ (FRUITS ID) ಪಡೆದುಕೊಳ್ಳಬೇಕು ಎಂದು ಅವರು ವಿವರಿಸಿದರು.  ಒಂದು ವೇಳೆ ರೈತರು ಈ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ, ಭವಿಷ್ಯದಲ್ಲಿ ಸರ್ಕಾರದಿಂದ ಸಿಗುವ ವಿವಿಧ ಆರ್ಥಿಕ ನೆರವು ಮತ್ತು ಇಲಾಖಾವಾರು ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆಯಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ರೈತರು ಕೂಡಲೇ ಈ ತಂತ್ರಾಂಶದಲ್ಲಿ ತಮ್ಮ ವಿವರಗಳನ್ನು ಅಪ್‌ಡೇಟ್ ಮಾಡಿಕೊಳ್ಳುವ ಮೂಲಕ ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

‘FRUITS ID’ ಪಡೆಯಲು ಅಗತ್ಯ ದಾಖಲೆಗಳು

  • ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
  • ಬ್ಯಾಂಕ್ ಪಾಸ್ಬುಕ್ ಪ್ರತಿ
  • ಎಲ್ಲಾ ಜಮೀನಿನ ಪಹಣಿ (RTC) ದಾಖಲೆಗಳು

ರೈತರು ಈ ದಾಖಲೆಗಳೊಂದಿಗೆ ಸಮೀಪದ

  • ರೈತ ಸಂಪರ್ಕ ಕೇಂದ್ರ
  • ಕಂದಾಯ ಇಲಾಖೆ ಕಚೇರಿ
  • ತೋಟಗಾರಿಕೆ ಇಲಾಖೆ
  • ರೇಷ್ಮೆ ಇಲಾಖೆ

ಇವುಗಳನ್ನು ಸಂಪರ್ಕಿಸಿ ತಮ್ಮ ‘FRUITS ID’ ಪಡೆಯಬಹುದು ಎಂದು ಸೂಚಿಸಲಾಗಿದೆ.

Farmers must register their land details in the FRUITS software to avail benefits of state and central government schemes. Joint Director Javeeda Naseema Khanum stated that schemes like PM-Kisan, crop insurance, and drought relief require mandatory FRUITS ID registration. Farmers are advised to complete the process with required documents to avoid missing benefits.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

46 minutes ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

4 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

13 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

15 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

16 hours ago