Advertisement
ಅಂತರಂಗ

ಸಾರ್ವಜನಿಕ ಬದುಕಿನಲ್ಲಿ ನಿರಾಸೆಯ ಸ್ಫೋಟ…

Share

ಸಾರ್ವಜನಿಕ‌ ಬದುಕಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದವರು ಅಥವಾ ತೊಡಗಿಸಿ ಕೊಂಡವರನ್ನು ಖಾಸಾಗಿಯಾಗಿ ಮಾತನಾಡಿಸಿ ಕೇಳಿ ನೋಡಿ.ಯಾವತ್ತಾದರೂ frustrationಗೆ ಒಳಗಾದ ಘಳಿಗೆಗಳು ಇವೆಯೇ ಅಂತ.ಪ್ರತಿಯೊಬ್ಬರೂ ತಂತಮ್ಮ frustrationಗಳನ್ನು ಬಿಚ್ವಿಡ್ತಾರೆ ನೋಡಿ. ಯಾರು ಪ್ರಾಮಾಣಿಕರಿದ್ದಾರೋ, ಯಾರೋ ಶುದ್ಧ ಹಸ್ತರಿದ್ದಾರೋ ಅವರುಗಳ frustration ಘಟನೆಗಳು ಹೆಚ್ಚು ಇರ್ತವೆ ,ಇದಕ್ಕೆ ಸಂದೇಹವೇ ಬೇಡ.……..ಮುಂದೆ ಓದಿ…..

ಸಾರ್ವಜನಿಕ ಬದುಕು ಅಂದರೆ ಹತ್ತಾರು ಜನರೊಡನೆ ಕೂಡಿ ಕೆಲಸ ಮಾಡಬೇಕು.ಈ ಹತ್ತಾರು ಜನ ಒಂದೇ ಮನೋಭಾವದವರಾಗಿರುವುದಿಲ್ಲ.ಇದರಲ್ಲಿ ಸ್ವಹಿತಾಸಕ್ತರು,ಮೋಸಗಾರರು,ಲಾಭಬಡುಕರುಗಳೂ ಇದ್ದೇ ಇರ್ತಾರೆ.

ಆ ಕಾರಣದಿಂದಾಗಿಯೇ ಅಲ್ಲವೇ ಮೋದಿಯವರಿಗೆ 2014ರ ಬಳಿಕ ‘ ನ‌ ಖಾನೇ ದೂಂಗಾ’ ಅಂತ ಹೇಳುವ ಧೈರ್ಯ ಬರದೇ ಇದ್ದದ್ದು. ಸಾರ್ವಜನಿಕ‌ ಬದುಕಿನಲ್ಲಿ ಯೋಜನೆಯೊಂದನ್ನು ಹಮ್ಮಿಕೊಂಡು ಪ್ರಾಮಾಣಿಕವಾಗಿ ಅನುಷ್ಟಾನಕ್ಕೆ ಇಳಿದಾಗ ಸಹಾಯಹಸ್ತಗಳ ಜೊತೆಗೆ ಅಡೆತಡೆಗಳೂ ಎದುರಾಗುತ್ತವೆ.ಅಡೆತಡೆಗಳ ನಿವಾರಣೆಗಳೇ frustrationಗೆ ಕಾರಣೀಭೂತಗಳಾಗುವಂತಹವು.ಅದರಲ್ಲೂ ತಮ್ಮವರು ಎಂದುಕೊಂಡವರಿಂದಲೇ ಅಡ್ಡಿ ಎದುರಾದರೆ ಅಥವಾ ಸಹಾಯ ನಿರಾಕರಿಸಲ್ಪಟ್ಟರೆ ಆಗ ಈ frustration ನಿಯಂತ್ರಣದ ಪರಿಧಿಯಿಂದ ಹೊರಬರುತ್ತದೆ,ಅದೆಲ್ಲೋ ಆಸ್ಪೋಟ ಗೊಳ್ಳುತ್ತದೆ.

ಮಧೂರಿನಲ್ಲಾದ್ದೂ ಇದೇ ಇರಬಹುದು ಎಂಬುದು ನನ್ನ ಊಹೆ. ಕೇಂದ್ರ ಸರಕಾರದಿಂದ ಹಣ ಬಿಡುಗಡೆ ಆಯ್ತು ಅಂದಾಗ ಒಂದಷ್ಟು ಭಾರ ಕಳಚಿದ ಅನುಭಾವ. ಅದನ್ನು ಬಿಡುಗಡೆ ಮಾಡಿಸುವಲ್ಲಿ ರಾಜ್ಯ ಸರಕಾರದ ನಿರಾಸಕ್ತಿಯನ್ನು ಅರ್ಥೈಸಿಕೊಳ್ಳ ಬಹುದು. ಯಾಕೆಂದರೆ ಅದು ದೇವರನ್ನು ನಂಬದ , ನಾಸ್ತಿಕ ಪಕ್ಷದ ನೇತೃತ್ವದ ಸರಕಾರ. ಸರಕಾರದ ಹಣ ಬಿಡುಗಡೆ ಆಗಬೇಕು ಎಂದರೆ,ಎಲ್ಲರಿಗೂ ಗೊತ್ತಿರುವಂತಹದ್ದೇ, ಮಾನದಂಡಗಳು ಪೂರೈಕೆಯಾಗ ಬೇಕು ಮತ್ತು ಆಡಳಿತ ಯಂತ್ರದ ಚಕ್ರ ಚಲಿಸುವಂತೆ ಮಾಡಿಸುವ ಸಾಮರ್ಥ್ಯವೂ ಬೇಕು.ಇಲ್ಲಿ ರಾಜಕಾರಣಿಗಳ ಅಥವಾ ಮಧ್ಯವರ್ತಿಗಳ ಸಹಾಯ ಹಸ್ತ ಇಲ್ಲದೇ ಹಣ ಬಿಡುಗಡೆ ಮರೀಚಿಕೆಯಾದೀತು.

ಹೇಳಬಹುದು ಪದಗಳ ಬಳಕೆಯಲ್ಲಿ ಎಚ್ಚರ ಬೇಕಿತ್ತು ಅಂತ.ಆದರೆ ನೋವು ಸ್ಫೋಟದ ಹಂತದಲ್ಲಿ ಎಚ್ಚರ ವಹಿಸುವ ಸಾಮರ್ಥ್ಯ ಇರುವುದಿಲ್ಲ.ಆಗ ಎಚ್ಚರ ಬೇಕಾದ್ದು ಕೇಳುಗರಿಗೆ. frustration ಹಂತ ಮೀರಿದೆ ಅಂತ ಅರ್ಥೈಸಿಕೊಳ್ಳ ಬೇಕಾದ್ದು ಕೇಳುಗರ ಜವಾಬ್ದಾರಿ. ಮಿಕ್ಕೆಲ್ಲ ವಿಷಯಗಳೂ ಸಮರ್ಪಕವಾಗಿದೆ, ಒಂದೆಡೆ ಮಾತ್ರ ಎಡವಟ್ಟಾಗಿದೆ ಎಂಬಂತಹ ಸಂದರ್ಭದಲ್ಲಂತೂ ಇಂತಹ ಎಚ್ಚರದ ಅಗತ್ಯ ಕೇಳುಗರಿಗೆ ಹೆಚ್ಚು.

ಸಾರ್ವಜನಿಕ ಬದುಕಿನ ಅದರಲ್ಲೂ ರಾಜಕೀಯ ನಂಟು ಬಂದರೆ ಇನ್ನೊಂದೇ ಆಟ ಇಂತಹ ಸಂದರ್ಭ ನಡೆಯುತ್ತದೆ.ಎದುರಾಳಿ ತಂಡ ತನ್ನ ಸರ್ವ ಶಕ್ತಿಯನ್ನೂ ಬಳಸಿ ಈತನನ್ನು ಮಣಿಸಲು ಯತ್ನಿಸುತ್ತದೆ. ಅದರಲ್ಲೂ ಒಂದು ರಾಜಕೀಯ ಪಕ್ಷ ಹಲವು ಬಣಗಳಾಗಿ ವಿಭಜಿತ ಗೊಂಡಿದ್ದಾಗಲಂತೂ ಇಂತಹ ಹಣಿಯುವಿಕೆಯ ಯತ್ನ ತೀವ್ರಗತಿಯನ್ನು ಪಡೆಯುತ್ತದೆ. ಆತ ಒಂಟಿಯಾಗಬೇಕು ಎಂದೇ ಭಾವಿಸುತ್ತದೆ ಹಾಗೂ ಒಳಗೊಳಗೇ ಮುಸಿಮುಸಿ ನಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರಮೇಶ್‌ ದೇಲಂಪಾಡಿ

ರಮೇಶ್‌ ದೇಲಂಪಾಡಿ ಅವರು ಕೃಷಿಕರು. ಪ್ರಯೋಗಶೀಲ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಅಡಿಕೆ, ತೆಂಗು, ತಾಳೆ, ರಬ್ಬರ್‌ ಇವರ ಪ್ರಮುಖ ಕೃಷಿ. ಅಡಿಕೆ ಬೇರುಹುಳ, ಅಡಿಕೆ ಹಳದಿ ಎಲೆರೋಗ ಸೇರಿದಂತೆ ಕೃಷಿ ಸಂಬಂಧಿತ ವಿಚಾರಗಳಲ್ಲಿ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ.

Published by
ರಮೇಶ್‌ ದೇಲಂಪಾಡಿ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

52 minutes ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 hour ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

3 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

4 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

15 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago