Advertisement
ಅಂತರಂಗ

ಸಾರ್ವಜನಿಕ ಬದುಕಿನಲ್ಲಿ ನಿರಾಸೆಯ ಸ್ಫೋಟ…

Share

ಸಾರ್ವಜನಿಕ‌ ಬದುಕಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದವರು ಅಥವಾ ತೊಡಗಿಸಿ ಕೊಂಡವರನ್ನು ಖಾಸಾಗಿಯಾಗಿ ಮಾತನಾಡಿಸಿ ಕೇಳಿ ನೋಡಿ.ಯಾವತ್ತಾದರೂ frustrationಗೆ ಒಳಗಾದ ಘಳಿಗೆಗಳು ಇವೆಯೇ ಅಂತ.ಪ್ರತಿಯೊಬ್ಬರೂ ತಂತಮ್ಮ frustrationಗಳನ್ನು ಬಿಚ್ವಿಡ್ತಾರೆ ನೋಡಿ. ಯಾರು ಪ್ರಾಮಾಣಿಕರಿದ್ದಾರೋ, ಯಾರೋ ಶುದ್ಧ ಹಸ್ತರಿದ್ದಾರೋ ಅವರುಗಳ frustration ಘಟನೆಗಳು ಹೆಚ್ಚು ಇರ್ತವೆ ,ಇದಕ್ಕೆ ಸಂದೇಹವೇ ಬೇಡ.……..ಮುಂದೆ ಓದಿ…..

ಸಾರ್ವಜನಿಕ ಬದುಕು ಅಂದರೆ ಹತ್ತಾರು ಜನರೊಡನೆ ಕೂಡಿ ಕೆಲಸ ಮಾಡಬೇಕು.ಈ ಹತ್ತಾರು ಜನ ಒಂದೇ ಮನೋಭಾವದವರಾಗಿರುವುದಿಲ್ಲ.ಇದರಲ್ಲಿ ಸ್ವಹಿತಾಸಕ್ತರು,ಮೋಸಗಾರರು,ಲಾಭಬಡುಕರುಗಳೂ ಇದ್ದೇ ಇರ್ತಾರೆ.

ಆ ಕಾರಣದಿಂದಾಗಿಯೇ ಅಲ್ಲವೇ ಮೋದಿಯವರಿಗೆ 2014ರ ಬಳಿಕ ‘ ನ‌ ಖಾನೇ ದೂಂಗಾ’ ಅಂತ ಹೇಳುವ ಧೈರ್ಯ ಬರದೇ ಇದ್ದದ್ದು. ಸಾರ್ವಜನಿಕ‌ ಬದುಕಿನಲ್ಲಿ ಯೋಜನೆಯೊಂದನ್ನು ಹಮ್ಮಿಕೊಂಡು ಪ್ರಾಮಾಣಿಕವಾಗಿ ಅನುಷ್ಟಾನಕ್ಕೆ ಇಳಿದಾಗ ಸಹಾಯಹಸ್ತಗಳ ಜೊತೆಗೆ ಅಡೆತಡೆಗಳೂ ಎದುರಾಗುತ್ತವೆ.ಅಡೆತಡೆಗಳ ನಿವಾರಣೆಗಳೇ frustrationಗೆ ಕಾರಣೀಭೂತಗಳಾಗುವಂತಹವು.ಅದರಲ್ಲೂ ತಮ್ಮವರು ಎಂದುಕೊಂಡವರಿಂದಲೇ ಅಡ್ಡಿ ಎದುರಾದರೆ ಅಥವಾ ಸಹಾಯ ನಿರಾಕರಿಸಲ್ಪಟ್ಟರೆ ಆಗ ಈ frustration ನಿಯಂತ್ರಣದ ಪರಿಧಿಯಿಂದ ಹೊರಬರುತ್ತದೆ,ಅದೆಲ್ಲೋ ಆಸ್ಪೋಟ ಗೊಳ್ಳುತ್ತದೆ.

ಮಧೂರಿನಲ್ಲಾದ್ದೂ ಇದೇ ಇರಬಹುದು ಎಂಬುದು ನನ್ನ ಊಹೆ. ಕೇಂದ್ರ ಸರಕಾರದಿಂದ ಹಣ ಬಿಡುಗಡೆ ಆಯ್ತು ಅಂದಾಗ ಒಂದಷ್ಟು ಭಾರ ಕಳಚಿದ ಅನುಭಾವ. ಅದನ್ನು ಬಿಡುಗಡೆ ಮಾಡಿಸುವಲ್ಲಿ ರಾಜ್ಯ ಸರಕಾರದ ನಿರಾಸಕ್ತಿಯನ್ನು ಅರ್ಥೈಸಿಕೊಳ್ಳ ಬಹುದು. ಯಾಕೆಂದರೆ ಅದು ದೇವರನ್ನು ನಂಬದ , ನಾಸ್ತಿಕ ಪಕ್ಷದ ನೇತೃತ್ವದ ಸರಕಾರ. ಸರಕಾರದ ಹಣ ಬಿಡುಗಡೆ ಆಗಬೇಕು ಎಂದರೆ,ಎಲ್ಲರಿಗೂ ಗೊತ್ತಿರುವಂತಹದ್ದೇ, ಮಾನದಂಡಗಳು ಪೂರೈಕೆಯಾಗ ಬೇಕು ಮತ್ತು ಆಡಳಿತ ಯಂತ್ರದ ಚಕ್ರ ಚಲಿಸುವಂತೆ ಮಾಡಿಸುವ ಸಾಮರ್ಥ್ಯವೂ ಬೇಕು.ಇಲ್ಲಿ ರಾಜಕಾರಣಿಗಳ ಅಥವಾ ಮಧ್ಯವರ್ತಿಗಳ ಸಹಾಯ ಹಸ್ತ ಇಲ್ಲದೇ ಹಣ ಬಿಡುಗಡೆ ಮರೀಚಿಕೆಯಾದೀತು.

ಹೇಳಬಹುದು ಪದಗಳ ಬಳಕೆಯಲ್ಲಿ ಎಚ್ಚರ ಬೇಕಿತ್ತು ಅಂತ.ಆದರೆ ನೋವು ಸ್ಫೋಟದ ಹಂತದಲ್ಲಿ ಎಚ್ಚರ ವಹಿಸುವ ಸಾಮರ್ಥ್ಯ ಇರುವುದಿಲ್ಲ.ಆಗ ಎಚ್ಚರ ಬೇಕಾದ್ದು ಕೇಳುಗರಿಗೆ. frustration ಹಂತ ಮೀರಿದೆ ಅಂತ ಅರ್ಥೈಸಿಕೊಳ್ಳ ಬೇಕಾದ್ದು ಕೇಳುಗರ ಜವಾಬ್ದಾರಿ. ಮಿಕ್ಕೆಲ್ಲ ವಿಷಯಗಳೂ ಸಮರ್ಪಕವಾಗಿದೆ, ಒಂದೆಡೆ ಮಾತ್ರ ಎಡವಟ್ಟಾಗಿದೆ ಎಂಬಂತಹ ಸಂದರ್ಭದಲ್ಲಂತೂ ಇಂತಹ ಎಚ್ಚರದ ಅಗತ್ಯ ಕೇಳುಗರಿಗೆ ಹೆಚ್ಚು.

ಸಾರ್ವಜನಿಕ ಬದುಕಿನ ಅದರಲ್ಲೂ ರಾಜಕೀಯ ನಂಟು ಬಂದರೆ ಇನ್ನೊಂದೇ ಆಟ ಇಂತಹ ಸಂದರ್ಭ ನಡೆಯುತ್ತದೆ.ಎದುರಾಳಿ ತಂಡ ತನ್ನ ಸರ್ವ ಶಕ್ತಿಯನ್ನೂ ಬಳಸಿ ಈತನನ್ನು ಮಣಿಸಲು ಯತ್ನಿಸುತ್ತದೆ. ಅದರಲ್ಲೂ ಒಂದು ರಾಜಕೀಯ ಪಕ್ಷ ಹಲವು ಬಣಗಳಾಗಿ ವಿಭಜಿತ ಗೊಂಡಿದ್ದಾಗಲಂತೂ ಇಂತಹ ಹಣಿಯುವಿಕೆಯ ಯತ್ನ ತೀವ್ರಗತಿಯನ್ನು ಪಡೆಯುತ್ತದೆ. ಆತ ಒಂಟಿಯಾಗಬೇಕು ಎಂದೇ ಭಾವಿಸುತ್ತದೆ ಹಾಗೂ ಒಳಗೊಳಗೇ ಮುಸಿಮುಸಿ ನಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರಮೇಶ್‌ ದೇಲಂಪಾಡಿ

ರಮೇಶ್‌ ದೇಲಂಪಾಡಿ ಅವರು ಕೃಷಿಕರು. ಪ್ರಯೋಗಶೀಲ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಅಡಿಕೆ, ತೆಂಗು, ತಾಳೆ, ರಬ್ಬರ್‌ ಇವರ ಪ್ರಮುಖ ಕೃಷಿ. ಅಡಿಕೆ ಬೇರುಹುಳ, ಅಡಿಕೆ ಹಳದಿ ಎಲೆರೋಗ ಸೇರಿದಂತೆ ಕೃಷಿ ಸಂಬಂಧಿತ ವಿಚಾರಗಳಲ್ಲಿ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ.

Published by
ರಮೇಶ್‌ ದೇಲಂಪಾಡಿ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 hour ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 hour ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

8 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

10 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

17 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

20 hours ago