Advertisement
ಸುದ್ದಿಗಳು

ಎ1 ಹಾಗೂ ಎ2 ಹಾಲು ಹಾಗೂ ಹಾಲಿನ ಉತ್ಪನ್ನಗಳ ಲೇಬಲ್‌ ತೆಗೆಯಲು ಸೂಚನೆ |

Share

ಹಾಲು ಮತ್ತು ಡೈರಿ ಉತ್ಪನ್ನಗಳ ಪ್ಯಾಕೇಜಿಂಗ್‌ ಮೇಲೆ ಎ1 ಮತ್ತು ಎ2 ಹಾಲು ಎಂದು ಇರುವ ಲೇಬಲ್‌ಗಳನ್ನು ತೆಗೆಯುವಂತೆ ಎಲ್ಲಾ ಹಾಲು ವ್ಯಾಪಾರ ನಿರ್ವಾಹಕರು ಮತ್ತು ಇ-ಕಾಮರ್ಸ್ ನ ಎಲ್ಲಾ ಹಾಲು ವಿತರಕರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ಸೂಚಿಸಿದೆ.…..ಮುಂದೆ ಓದಿ….

 

FSSAI ಪರವಾನಗಿ ಸಂಖ್ಯೆಗಳನ್ನು ಬಳಸಿಕೊಂಡು ಎ1 ಮತ್ತುಎ2 ವರ್ಗೀಕರಣದ ಅಡಿಯಲ್ಲಿ ಹಲವಾರು ಸಂಸ್ಥೆಗಳು ಹಾಲು ಮತ್ತು ಹಾಲಿನ ಉತ್ಪನ್ನಗಳಾದ ತುಪ್ಪ, ಬೆಣ್ಣೆ ಮತ್ತು ಮೊಸರುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಆಹಾರ ನಿಯಂತ್ರಕವು ಹಾಲಿನ ಎ1 ಮತ್ತು ಎ2 ವ್ಯತ್ಯಾಸವು ಮೂಲಭೂತವಾಗಿ ಪ್ರೋಟೀನ್‌ನ  ವ್ಯತ್ಯಾಸಕ್ಕೆ ಸಂಬಂಧಿಸಿದೆ. ಆದ್ದರಿಂದ, ಹಾಲಿನ ಕೊಬ್ಬಿನ ಉತ್ಪನ್ನಗಳ ಮೇಲೆ ಯಾವುದೇ ಎ2 ಹಾಲಿನ ಬಗ್ಗೆ ತಪ್ಪುದಾರಿಗೆಳೆಯುವ ಮತ್ತು FSSAI ಕಾಯಿದೆ 2006 ಮತ್ತು ಅದರ ನಿಬಂಧನೆಗಳಿಗೆ ಕೂಡಾ ಅನುಗುಣವಾಗಿಲ್ಲ ಎಂದು ಹೇಳಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ನಿಯಮಾವಳಿಗಳಲ್ಲಿ ನಿರ್ದಿಷ್ಟಪಡಿಸಿದ ಹಾಲಿನ ಮಾನದಂಡಗಳು,ಎ1 ಮತ್ತುಎ2 ಪ್ರಕಾರಗಳ ಆಧಾರದ ಮೇಲೆ ಹಾಲಿನ ಯಾವುದೇ ವ್ಯತ್ಯಾಸವನ್ನು ಉಲ್ಲೇಖಿಸುವುದಿಲ್ಲ ಅಥವಾ ಗುರುತಿಸುವುದಿಲ್ಲ ಎಂದು FSSAI ಹೇಳಿದೆ. ಹೀಗಾಗಿ ಮುಂದೆ ಈ ಬಗ್ಗೆ ಉಲ್ಲೇಖಿಸದಂತೆ ಸೂಚಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

9 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

15 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago