MIRROR FOCUS

ಕಾಳುಮೆಣಸು ಧಾರಣೆ ಈ ಬಾರಿ ಹೇಗಿರಬಹುದು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಳುಮೆಣಸು ಮಾರುಕಟ್ಟೆಯಲ್ಲಿ ಬಹುತೇಕ ಸ್ಥಿರತೆ ಇದೆ.700 ರೂಪಾಯಿ ತಲಪಿದ್ದ ಕಾಳುಮೆಣಸಿನ ಧಾರಣೆ 610ಕ್ಕೆ ತಲಪಿದೆ. ಈ ಧಾರಣೆ ಮುಂದಿನ ಎರಡು ತಿಂಗಳಲ್ಲಿ ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಣೆ ಹೇಳಿದೆ.…..ಮುಂದೆ ಓದಿ….

Advertisement

ಕಾಳುಮೆಣಸು ಬೇಡಿಕೆ ಹೆಚ್ಚಾಗುತ್ತಿದ್ದಂತೆಯೇ ಧಾರಣೆಯೂ ಏರಿಕೆ ಕಂಡಿತು. ಹವಾಮಾನದ ಕಾರಣದಿಂದ ಪ್ರಪಂಚದಲ್ಲಿ ಕಾಳುಮೆಣಸು ಉತ್ಪಾದನೆಯಲ್ಲಿ ಕೊರತೆಯಾದ ಕಾರಣ ಆಮದು-ರಫ್ತು ವಹಿವಾಟು ಕೂಡಾ ಸಾಧ್ಯವಾಗದೆ  ಅಂತರಾಷ್ಟ್ರೀಯ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿತು. ಭಾರತದಲ್ಲೂ ಕಾಳುಮೆಣಸು ಧಾರಣೆ 700 ರೂಪಾಯಿ ತಲಪಿತ್ತು. ಅದಾಗಿ ನಂತರ ಕಾಳುಮೆಣಸು ಬೆಳೆಯ ಅವಧಿಯಿಂದ ಉತ್ಪಾದನೆ ಹೆಚ್ಚಾಯಿತು. ಆಮದು-ರಫ್ತು ಸ್ವಲ್ಪ ಪ್ರಮಾಣದಲ್ಲಿ ಚುರುಕಾಯ್ತು. ಈ ನಡುವೆ ಶ್ರೀಲಂಕಾದಿಂದ ಭಾರತಕ್ಕೆ ಕಳಪೆ ಗುಣಮಟ್ಟದ ಕಾಳುಮೆಣಸು ಬಂದಿರುವ ಕಾರಣದಿಂದ ಭಾರತದಲ್ಲಿ ಧಾರಣೆ ಇಳಿಕೆಗೆ ಪ್ರಮುಖ ಕಾರಣವಾಯಿತು. ಹೀಗಾಗಿ 600 ರೂಪಾಯಿ ಆಸುಪಾಸಿನಲ್ಲಿ ಕಳೆದ ಸುಮಾರು 6 ತಿಂಗಳಿನಿಂದ ಇದೆ.

ಶ್ರೀಲಂಕಾ, ವಿಯೆಟ್ನಾಂ, ಬ್ರೆಜಿಲ್ ಮೊದಲಾದ ಕಾಳುಮೆಣಸು ಬೆಳೆಯುವ ದೇಶಗಳಿಂದ ಭಾರತ ಕಾಳುಮೆಣಸು ಆಮದು ಮಾಡಿಕೊಳ್ಳುತ್ತದೆ. ಈ ಸಲ 12 ಸಾವಿರ ಟನ್‌ನಷ್ಟು ಕಾಳುಮೆಣಸು ದೇಶಕ್ಕೆ ಬಂದಿದೆ. ಇದರಲ್ಲಿ ಶ್ರೀಲಂಕಾದಿಂದಲೇ 10 ಸಾವಿರ ಟನ್‍ನಷ್ಟು ಕಾಳುಮೆಣಸು ಬಂದಿದೆ. ಮುಕ್ತ ವ್ಯಾಪಾರ ಮಾರುಕಟ್ಟೆ ಒಪ್ಪಂದದ ಪ್ರಕಾರ ಶ್ರೀಲಂಕಾದಿಂದ ಭಾರತಕ್ಕೆ 2,500 ಟನ್‌ ಕಾಳುಮೆಣಸನ್ನು ಯಾವುದೇ ತೆರಿಗೆ ಇಲ್ಲದೆ ತರಬಹುದಾಗಿದೆ. ಹೀಗಾಗಿ ದೇಶೀಯ ಕಾಳುಮೆಣಸು ಧಾರಣೆ ಕಳೆದ ಬಾರಿ ಇಳಿಕೆಯಾಗಿತ್ತು. ಇತರ ದೇಶಗಳಲ್ಲಿ ಕಾಳುಮೆಣಸು ಉತ್ಪಾದನೆಯೂ ಕುಂಠಿತವಾಗಿತ್ತು.

ಈ ಬಾರಿ ಇನ್ನು ಕೆಲವೇ ಸಮಯದಲ್ಲಿ ಇಳುವರಿ ಆರಂಭವಾಗುತ್ತದೆ. ಸದ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಕಾಳುಮೆಣಸು ಇಳುವರಿ ಉತ್ತಮವಾಗಿದ್ದರೆ ಹಲವು ಕಡೆಗಳಲ್ಲಿ ಉತ್ತಮ ಇಳುವರಿ ಇಲ್ಲ. ಹವಾಮಾನದ ಕಾರಣದಿಂದ ಉತ್ತಮವಾದ ಫಸಲು ಕಾಣಲಿಲ್ಲ. ಈಗಾಗಲೇ ವಿಯೆಟ್ನಾಂ ಮೊದಲಾದ ದೇಶಗಳಲ್ಲಿ ಕಾಳುಮೆಣಸು ಇಳುವರಿ ಹಾಗೂ ಬೇಡಿಕೆಯ ಬಗ್ಗೆ ಲೆಕ್ಕಾಚಾರಗಳು ನಡೆದಿದೆ. ಅಲ್ಲಿ ಈ ಬಾರಿಯೂ ಕಾಳುಮೆಣಸು ಕೊರತೆಯ ನಿರೀಕ್ಷೆ ಇದೆ. ಹೀಗಾಗಿ ಧಾರಣೆ ಏರಿಕೆಯಾಗಬಹುದು ಎಂದು ಮಾರುಕಟ್ಟೆ ವಲಯ ಅಭಿಪ್ರಾಯಪಟ್ಟಿದೆ. ವಿಯೆಟ್ನಾಂ, ಬ್ರೆಜಿಲ್‌ ಸೇರಿದಂತೆ ಕಾಳುಮೆಣಸು ಬೆಳೆಯುವ ದೇಶಗಳಲ್ಲಿ ಈಗಾಗಲೇ ಇದೇ ಅಭಿಪ್ರಾಯ ವ್ಯಕ್ತವಾಗಿದೆ. ಇಳುವರಿ ಕೊರತೆ-ಬೇಡಿಕೆ ಹೆಚ್ಚಿದೆ.  ಹೀಗಾಗಿ ಕೆಲವು ವ್ಯಾಪಾರಿಗಳು ಕಾಳುಮೆಣಸಿನ ಜೊತೆ ಕಾಫಿ ಖರೀದಿಯತ್ತಲೂ ಆಸಕ್ತಿ ಹೊಂದಿದ್ದಾರೆ. ಕಾಫಿ ಉತ್ಪನ್ನಗಳ ಮೇಲೆ ಹೂಡಿಕೆ ಮಾಡಲು ತೊಡಗಿದ್ದಾರೆ.

ಮಾರುಕಟ್ಟೆ ತಜ್ಞರ ಪ್ರಕಾರ, ಮುಂಬರುವ ದಿನಗಳಲ್ಲಿ ಹವಾಮಾನದ ಕಾರಣದಿಂದಲೇ ಕಾಳುಮೆಣಸು ಇಳುವರಿ ಕಡಿಮೆಯಾಗಿ ಬೇಡಿಕೆ ಹೆಚ್ಚಲಿದೆ. ಹೀಗಾಗಿ ಭಾರತದಲ್ಲೂ ಕಾಳುಮೆಣಸು ಧಾರಣೆ ಏರಿಕೆಯ ನಿರೀಕ್ಷೆ ಇದೆ. ಆಮದು ತಡೆಗೆ ಸೂಕ್ತ ಕ್ರಮಗಳು ಆದರೆ ಕನಿಷ್ಟ 700 ರೂಪಾಯಿ ತಲಪುವ ಸಾಧ್ಯತೆ ಇದೆ ಎನ್ನುತ್ತದೆ ಮಾರುಕಟ್ಟೆ ವಲಯ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು…

23 minutes ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ…

39 minutes ago

ಜೀವನ ಪೂರ್ತಿ ಈ ರಾಶಿಯವರ ಮೇಲಿರುವುದು ಗುರು ಬಲ !

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

57 minutes ago

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

18 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

21 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

24 hours ago