ಕಾಳುಮೆಣಸು ಮಾರುಕಟ್ಟೆಯಲ್ಲಿ ಬಹುತೇಕ ಸ್ಥಿರತೆ ಇದೆ.700 ರೂಪಾಯಿ ತಲಪಿದ್ದ ಕಾಳುಮೆಣಸಿನ ಧಾರಣೆ 610ಕ್ಕೆ ತಲಪಿದೆ. ಈ ಧಾರಣೆ ಮುಂದಿನ ಎರಡು ತಿಂಗಳಲ್ಲಿ ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಣೆ ಹೇಳಿದೆ.…..ಮುಂದೆ ಓದಿ….
ಕಾಳುಮೆಣಸು ಬೇಡಿಕೆ ಹೆಚ್ಚಾಗುತ್ತಿದ್ದಂತೆಯೇ ಧಾರಣೆಯೂ ಏರಿಕೆ ಕಂಡಿತು. ಹವಾಮಾನದ ಕಾರಣದಿಂದ ಪ್ರಪಂಚದಲ್ಲಿ ಕಾಳುಮೆಣಸು ಉತ್ಪಾದನೆಯಲ್ಲಿ ಕೊರತೆಯಾದ ಕಾರಣ ಆಮದು-ರಫ್ತು ವಹಿವಾಟು ಕೂಡಾ ಸಾಧ್ಯವಾಗದೆ ಅಂತರಾಷ್ಟ್ರೀಯ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿತು. ಭಾರತದಲ್ಲೂ ಕಾಳುಮೆಣಸು ಧಾರಣೆ 700 ರೂಪಾಯಿ ತಲಪಿತ್ತು. ಅದಾಗಿ ನಂತರ ಕಾಳುಮೆಣಸು ಬೆಳೆಯ ಅವಧಿಯಿಂದ ಉತ್ಪಾದನೆ ಹೆಚ್ಚಾಯಿತು. ಆಮದು-ರಫ್ತು ಸ್ವಲ್ಪ ಪ್ರಮಾಣದಲ್ಲಿ ಚುರುಕಾಯ್ತು. ಈ ನಡುವೆ ಶ್ರೀಲಂಕಾದಿಂದ ಭಾರತಕ್ಕೆ ಕಳಪೆ ಗುಣಮಟ್ಟದ ಕಾಳುಮೆಣಸು ಬಂದಿರುವ ಕಾರಣದಿಂದ ಭಾರತದಲ್ಲಿ ಧಾರಣೆ ಇಳಿಕೆಗೆ ಪ್ರಮುಖ ಕಾರಣವಾಯಿತು. ಹೀಗಾಗಿ 600 ರೂಪಾಯಿ ಆಸುಪಾಸಿನಲ್ಲಿ ಕಳೆದ ಸುಮಾರು 6 ತಿಂಗಳಿನಿಂದ ಇದೆ.
ಶ್ರೀಲಂಕಾ, ವಿಯೆಟ್ನಾಂ, ಬ್ರೆಜಿಲ್ ಮೊದಲಾದ ಕಾಳುಮೆಣಸು ಬೆಳೆಯುವ ದೇಶಗಳಿಂದ ಭಾರತ ಕಾಳುಮೆಣಸು ಆಮದು ಮಾಡಿಕೊಳ್ಳುತ್ತದೆ. ಈ ಸಲ 12 ಸಾವಿರ ಟನ್ನಷ್ಟು ಕಾಳುಮೆಣಸು ದೇಶಕ್ಕೆ ಬಂದಿದೆ. ಇದರಲ್ಲಿ ಶ್ರೀಲಂಕಾದಿಂದಲೇ 10 ಸಾವಿರ ಟನ್ನಷ್ಟು ಕಾಳುಮೆಣಸು ಬಂದಿದೆ. ಮುಕ್ತ ವ್ಯಾಪಾರ ಮಾರುಕಟ್ಟೆ ಒಪ್ಪಂದದ ಪ್ರಕಾರ ಶ್ರೀಲಂಕಾದಿಂದ ಭಾರತಕ್ಕೆ 2,500 ಟನ್ ಕಾಳುಮೆಣಸನ್ನು ಯಾವುದೇ ತೆರಿಗೆ ಇಲ್ಲದೆ ತರಬಹುದಾಗಿದೆ. ಹೀಗಾಗಿ ದೇಶೀಯ ಕಾಳುಮೆಣಸು ಧಾರಣೆ ಕಳೆದ ಬಾರಿ ಇಳಿಕೆಯಾಗಿತ್ತು. ಇತರ ದೇಶಗಳಲ್ಲಿ ಕಾಳುಮೆಣಸು ಉತ್ಪಾದನೆಯೂ ಕುಂಠಿತವಾಗಿತ್ತು.
ಈ ಬಾರಿ ಇನ್ನು ಕೆಲವೇ ಸಮಯದಲ್ಲಿ ಇಳುವರಿ ಆರಂಭವಾಗುತ್ತದೆ. ಸದ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಕಾಳುಮೆಣಸು ಇಳುವರಿ ಉತ್ತಮವಾಗಿದ್ದರೆ ಹಲವು ಕಡೆಗಳಲ್ಲಿ ಉತ್ತಮ ಇಳುವರಿ ಇಲ್ಲ. ಹವಾಮಾನದ ಕಾರಣದಿಂದ ಉತ್ತಮವಾದ ಫಸಲು ಕಾಣಲಿಲ್ಲ. ಈಗಾಗಲೇ ವಿಯೆಟ್ನಾಂ ಮೊದಲಾದ ದೇಶಗಳಲ್ಲಿ ಕಾಳುಮೆಣಸು ಇಳುವರಿ ಹಾಗೂ ಬೇಡಿಕೆಯ ಬಗ್ಗೆ ಲೆಕ್ಕಾಚಾರಗಳು ನಡೆದಿದೆ. ಅಲ್ಲಿ ಈ ಬಾರಿಯೂ ಕಾಳುಮೆಣಸು ಕೊರತೆಯ ನಿರೀಕ್ಷೆ ಇದೆ. ಹೀಗಾಗಿ ಧಾರಣೆ ಏರಿಕೆಯಾಗಬಹುದು ಎಂದು ಮಾರುಕಟ್ಟೆ ವಲಯ ಅಭಿಪ್ರಾಯಪಟ್ಟಿದೆ. ವಿಯೆಟ್ನಾಂ, ಬ್ರೆಜಿಲ್ ಸೇರಿದಂತೆ ಕಾಳುಮೆಣಸು ಬೆಳೆಯುವ ದೇಶಗಳಲ್ಲಿ ಈಗಾಗಲೇ ಇದೇ ಅಭಿಪ್ರಾಯ ವ್ಯಕ್ತವಾಗಿದೆ. ಇಳುವರಿ ಕೊರತೆ-ಬೇಡಿಕೆ ಹೆಚ್ಚಿದೆ. ಹೀಗಾಗಿ ಕೆಲವು ವ್ಯಾಪಾರಿಗಳು ಕಾಳುಮೆಣಸಿನ ಜೊತೆ ಕಾಫಿ ಖರೀದಿಯತ್ತಲೂ ಆಸಕ್ತಿ ಹೊಂದಿದ್ದಾರೆ. ಕಾಫಿ ಉತ್ಪನ್ನಗಳ ಮೇಲೆ ಹೂಡಿಕೆ ಮಾಡಲು ತೊಡಗಿದ್ದಾರೆ.
ಮಾರುಕಟ್ಟೆ ತಜ್ಞರ ಪ್ರಕಾರ, ಮುಂಬರುವ ದಿನಗಳಲ್ಲಿ ಹವಾಮಾನದ ಕಾರಣದಿಂದಲೇ ಕಾಳುಮೆಣಸು ಇಳುವರಿ ಕಡಿಮೆಯಾಗಿ ಬೇಡಿಕೆ ಹೆಚ್ಚಲಿದೆ. ಹೀಗಾಗಿ ಭಾರತದಲ್ಲೂ ಕಾಳುಮೆಣಸು ಧಾರಣೆ ಏರಿಕೆಯ ನಿರೀಕ್ಷೆ ಇದೆ. ಆಮದು ತಡೆಗೆ ಸೂಕ್ತ ಕ್ರಮಗಳು ಆದರೆ ಕನಿಷ್ಟ 700 ರೂಪಾಯಿ ತಲಪುವ ಸಾಧ್ಯತೆ ಇದೆ ಎನ್ನುತ್ತದೆ ಮಾರುಕಟ್ಟೆ ವಲಯ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…