Advertisement
MIRROR FOCUS

ಕಾಳುಮೆಣಸು ಧಾರಣೆ ಈ ಬಾರಿ ಹೇಗಿರಬಹುದು..?

Share

ಕಾಳುಮೆಣಸು ಮಾರುಕಟ್ಟೆಯಲ್ಲಿ ಬಹುತೇಕ ಸ್ಥಿರತೆ ಇದೆ.700 ರೂಪಾಯಿ ತಲಪಿದ್ದ ಕಾಳುಮೆಣಸಿನ ಧಾರಣೆ 610ಕ್ಕೆ ತಲಪಿದೆ. ಈ ಧಾರಣೆ ಮುಂದಿನ ಎರಡು ತಿಂಗಳಲ್ಲಿ ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಣೆ ಹೇಳಿದೆ.…..ಮುಂದೆ ಓದಿ….

ಕಾಳುಮೆಣಸು ಬೇಡಿಕೆ ಹೆಚ್ಚಾಗುತ್ತಿದ್ದಂತೆಯೇ ಧಾರಣೆಯೂ ಏರಿಕೆ ಕಂಡಿತು. ಹವಾಮಾನದ ಕಾರಣದಿಂದ ಪ್ರಪಂಚದಲ್ಲಿ ಕಾಳುಮೆಣಸು ಉತ್ಪಾದನೆಯಲ್ಲಿ ಕೊರತೆಯಾದ ಕಾರಣ ಆಮದು-ರಫ್ತು ವಹಿವಾಟು ಕೂಡಾ ಸಾಧ್ಯವಾಗದೆ  ಅಂತರಾಷ್ಟ್ರೀಯ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿತು. ಭಾರತದಲ್ಲೂ ಕಾಳುಮೆಣಸು ಧಾರಣೆ 700 ರೂಪಾಯಿ ತಲಪಿತ್ತು. ಅದಾಗಿ ನಂತರ ಕಾಳುಮೆಣಸು ಬೆಳೆಯ ಅವಧಿಯಿಂದ ಉತ್ಪಾದನೆ ಹೆಚ್ಚಾಯಿತು. ಆಮದು-ರಫ್ತು ಸ್ವಲ್ಪ ಪ್ರಮಾಣದಲ್ಲಿ ಚುರುಕಾಯ್ತು. ಈ ನಡುವೆ ಶ್ರೀಲಂಕಾದಿಂದ ಭಾರತಕ್ಕೆ ಕಳಪೆ ಗುಣಮಟ್ಟದ ಕಾಳುಮೆಣಸು ಬಂದಿರುವ ಕಾರಣದಿಂದ ಭಾರತದಲ್ಲಿ ಧಾರಣೆ ಇಳಿಕೆಗೆ ಪ್ರಮುಖ ಕಾರಣವಾಯಿತು. ಹೀಗಾಗಿ 600 ರೂಪಾಯಿ ಆಸುಪಾಸಿನಲ್ಲಿ ಕಳೆದ ಸುಮಾರು 6 ತಿಂಗಳಿನಿಂದ ಇದೆ.

ಶ್ರೀಲಂಕಾ, ವಿಯೆಟ್ನಾಂ, ಬ್ರೆಜಿಲ್ ಮೊದಲಾದ ಕಾಳುಮೆಣಸು ಬೆಳೆಯುವ ದೇಶಗಳಿಂದ ಭಾರತ ಕಾಳುಮೆಣಸು ಆಮದು ಮಾಡಿಕೊಳ್ಳುತ್ತದೆ. ಈ ಸಲ 12 ಸಾವಿರ ಟನ್‌ನಷ್ಟು ಕಾಳುಮೆಣಸು ದೇಶಕ್ಕೆ ಬಂದಿದೆ. ಇದರಲ್ಲಿ ಶ್ರೀಲಂಕಾದಿಂದಲೇ 10 ಸಾವಿರ ಟನ್‍ನಷ್ಟು ಕಾಳುಮೆಣಸು ಬಂದಿದೆ. ಮುಕ್ತ ವ್ಯಾಪಾರ ಮಾರುಕಟ್ಟೆ ಒಪ್ಪಂದದ ಪ್ರಕಾರ ಶ್ರೀಲಂಕಾದಿಂದ ಭಾರತಕ್ಕೆ 2,500 ಟನ್‌ ಕಾಳುಮೆಣಸನ್ನು ಯಾವುದೇ ತೆರಿಗೆ ಇಲ್ಲದೆ ತರಬಹುದಾಗಿದೆ. ಹೀಗಾಗಿ ದೇಶೀಯ ಕಾಳುಮೆಣಸು ಧಾರಣೆ ಕಳೆದ ಬಾರಿ ಇಳಿಕೆಯಾಗಿತ್ತು. ಇತರ ದೇಶಗಳಲ್ಲಿ ಕಾಳುಮೆಣಸು ಉತ್ಪಾದನೆಯೂ ಕುಂಠಿತವಾಗಿತ್ತು.

ಈ ಬಾರಿ ಇನ್ನು ಕೆಲವೇ ಸಮಯದಲ್ಲಿ ಇಳುವರಿ ಆರಂಭವಾಗುತ್ತದೆ. ಸದ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಕಾಳುಮೆಣಸು ಇಳುವರಿ ಉತ್ತಮವಾಗಿದ್ದರೆ ಹಲವು ಕಡೆಗಳಲ್ಲಿ ಉತ್ತಮ ಇಳುವರಿ ಇಲ್ಲ. ಹವಾಮಾನದ ಕಾರಣದಿಂದ ಉತ್ತಮವಾದ ಫಸಲು ಕಾಣಲಿಲ್ಲ. ಈಗಾಗಲೇ ವಿಯೆಟ್ನಾಂ ಮೊದಲಾದ ದೇಶಗಳಲ್ಲಿ ಕಾಳುಮೆಣಸು ಇಳುವರಿ ಹಾಗೂ ಬೇಡಿಕೆಯ ಬಗ್ಗೆ ಲೆಕ್ಕಾಚಾರಗಳು ನಡೆದಿದೆ. ಅಲ್ಲಿ ಈ ಬಾರಿಯೂ ಕಾಳುಮೆಣಸು ಕೊರತೆಯ ನಿರೀಕ್ಷೆ ಇದೆ. ಹೀಗಾಗಿ ಧಾರಣೆ ಏರಿಕೆಯಾಗಬಹುದು ಎಂದು ಮಾರುಕಟ್ಟೆ ವಲಯ ಅಭಿಪ್ರಾಯಪಟ್ಟಿದೆ. ವಿಯೆಟ್ನಾಂ, ಬ್ರೆಜಿಲ್‌ ಸೇರಿದಂತೆ ಕಾಳುಮೆಣಸು ಬೆಳೆಯುವ ದೇಶಗಳಲ್ಲಿ ಈಗಾಗಲೇ ಇದೇ ಅಭಿಪ್ರಾಯ ವ್ಯಕ್ತವಾಗಿದೆ. ಇಳುವರಿ ಕೊರತೆ-ಬೇಡಿಕೆ ಹೆಚ್ಚಿದೆ.  ಹೀಗಾಗಿ ಕೆಲವು ವ್ಯಾಪಾರಿಗಳು ಕಾಳುಮೆಣಸಿನ ಜೊತೆ ಕಾಫಿ ಖರೀದಿಯತ್ತಲೂ ಆಸಕ್ತಿ ಹೊಂದಿದ್ದಾರೆ. ಕಾಫಿ ಉತ್ಪನ್ನಗಳ ಮೇಲೆ ಹೂಡಿಕೆ ಮಾಡಲು ತೊಡಗಿದ್ದಾರೆ.

ಮಾರುಕಟ್ಟೆ ತಜ್ಞರ ಪ್ರಕಾರ, ಮುಂಬರುವ ದಿನಗಳಲ್ಲಿ ಹವಾಮಾನದ ಕಾರಣದಿಂದಲೇ ಕಾಳುಮೆಣಸು ಇಳುವರಿ ಕಡಿಮೆಯಾಗಿ ಬೇಡಿಕೆ ಹೆಚ್ಚಲಿದೆ. ಹೀಗಾಗಿ ಭಾರತದಲ್ಲೂ ಕಾಳುಮೆಣಸು ಧಾರಣೆ ಏರಿಕೆಯ ನಿರೀಕ್ಷೆ ಇದೆ. ಆಮದು ತಡೆಗೆ ಸೂಕ್ತ ಕ್ರಮಗಳು ಆದರೆ ಕನಿಷ್ಟ 700 ರೂಪಾಯಿ ತಲಪುವ ಸಾಧ್ಯತೆ ಇದೆ ಎನ್ನುತ್ತದೆ ಮಾರುಕಟ್ಟೆ ವಲಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

6 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

7 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

8 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

17 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

19 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago