Advertisement
MIRROR FOCUS

ಕಾಳುಮೆಣಸು ಧಾರಣೆ ಈ ಬಾರಿ ಹೇಗಿರಬಹುದು..?

Share

ಕಾಳುಮೆಣಸು ಮಾರುಕಟ್ಟೆಯಲ್ಲಿ ಬಹುತೇಕ ಸ್ಥಿರತೆ ಇದೆ.700 ರೂಪಾಯಿ ತಲಪಿದ್ದ ಕಾಳುಮೆಣಸಿನ ಧಾರಣೆ 610ಕ್ಕೆ ತಲಪಿದೆ. ಈ ಧಾರಣೆ ಮುಂದಿನ ಎರಡು ತಿಂಗಳಲ್ಲಿ ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಣೆ ಹೇಳಿದೆ.…..ಮುಂದೆ ಓದಿ….

ಕಾಳುಮೆಣಸು ಬೇಡಿಕೆ ಹೆಚ್ಚಾಗುತ್ತಿದ್ದಂತೆಯೇ ಧಾರಣೆಯೂ ಏರಿಕೆ ಕಂಡಿತು. ಹವಾಮಾನದ ಕಾರಣದಿಂದ ಪ್ರಪಂಚದಲ್ಲಿ ಕಾಳುಮೆಣಸು ಉತ್ಪಾದನೆಯಲ್ಲಿ ಕೊರತೆಯಾದ ಕಾರಣ ಆಮದು-ರಫ್ತು ವಹಿವಾಟು ಕೂಡಾ ಸಾಧ್ಯವಾಗದೆ  ಅಂತರಾಷ್ಟ್ರೀಯ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿತು. ಭಾರತದಲ್ಲೂ ಕಾಳುಮೆಣಸು ಧಾರಣೆ 700 ರೂಪಾಯಿ ತಲಪಿತ್ತು. ಅದಾಗಿ ನಂತರ ಕಾಳುಮೆಣಸು ಬೆಳೆಯ ಅವಧಿಯಿಂದ ಉತ್ಪಾದನೆ ಹೆಚ್ಚಾಯಿತು. ಆಮದು-ರಫ್ತು ಸ್ವಲ್ಪ ಪ್ರಮಾಣದಲ್ಲಿ ಚುರುಕಾಯ್ತು. ಈ ನಡುವೆ ಶ್ರೀಲಂಕಾದಿಂದ ಭಾರತಕ್ಕೆ ಕಳಪೆ ಗುಣಮಟ್ಟದ ಕಾಳುಮೆಣಸು ಬಂದಿರುವ ಕಾರಣದಿಂದ ಭಾರತದಲ್ಲಿ ಧಾರಣೆ ಇಳಿಕೆಗೆ ಪ್ರಮುಖ ಕಾರಣವಾಯಿತು. ಹೀಗಾಗಿ 600 ರೂಪಾಯಿ ಆಸುಪಾಸಿನಲ್ಲಿ ಕಳೆದ ಸುಮಾರು 6 ತಿಂಗಳಿನಿಂದ ಇದೆ.

ಶ್ರೀಲಂಕಾ, ವಿಯೆಟ್ನಾಂ, ಬ್ರೆಜಿಲ್ ಮೊದಲಾದ ಕಾಳುಮೆಣಸು ಬೆಳೆಯುವ ದೇಶಗಳಿಂದ ಭಾರತ ಕಾಳುಮೆಣಸು ಆಮದು ಮಾಡಿಕೊಳ್ಳುತ್ತದೆ. ಈ ಸಲ 12 ಸಾವಿರ ಟನ್‌ನಷ್ಟು ಕಾಳುಮೆಣಸು ದೇಶಕ್ಕೆ ಬಂದಿದೆ. ಇದರಲ್ಲಿ ಶ್ರೀಲಂಕಾದಿಂದಲೇ 10 ಸಾವಿರ ಟನ್‍ನಷ್ಟು ಕಾಳುಮೆಣಸು ಬಂದಿದೆ. ಮುಕ್ತ ವ್ಯಾಪಾರ ಮಾರುಕಟ್ಟೆ ಒಪ್ಪಂದದ ಪ್ರಕಾರ ಶ್ರೀಲಂಕಾದಿಂದ ಭಾರತಕ್ಕೆ 2,500 ಟನ್‌ ಕಾಳುಮೆಣಸನ್ನು ಯಾವುದೇ ತೆರಿಗೆ ಇಲ್ಲದೆ ತರಬಹುದಾಗಿದೆ. ಹೀಗಾಗಿ ದೇಶೀಯ ಕಾಳುಮೆಣಸು ಧಾರಣೆ ಕಳೆದ ಬಾರಿ ಇಳಿಕೆಯಾಗಿತ್ತು. ಇತರ ದೇಶಗಳಲ್ಲಿ ಕಾಳುಮೆಣಸು ಉತ್ಪಾದನೆಯೂ ಕುಂಠಿತವಾಗಿತ್ತು.

ಈ ಬಾರಿ ಇನ್ನು ಕೆಲವೇ ಸಮಯದಲ್ಲಿ ಇಳುವರಿ ಆರಂಭವಾಗುತ್ತದೆ. ಸದ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಕಾಳುಮೆಣಸು ಇಳುವರಿ ಉತ್ತಮವಾಗಿದ್ದರೆ ಹಲವು ಕಡೆಗಳಲ್ಲಿ ಉತ್ತಮ ಇಳುವರಿ ಇಲ್ಲ. ಹವಾಮಾನದ ಕಾರಣದಿಂದ ಉತ್ತಮವಾದ ಫಸಲು ಕಾಣಲಿಲ್ಲ. ಈಗಾಗಲೇ ವಿಯೆಟ್ನಾಂ ಮೊದಲಾದ ದೇಶಗಳಲ್ಲಿ ಕಾಳುಮೆಣಸು ಇಳುವರಿ ಹಾಗೂ ಬೇಡಿಕೆಯ ಬಗ್ಗೆ ಲೆಕ್ಕಾಚಾರಗಳು ನಡೆದಿದೆ. ಅಲ್ಲಿ ಈ ಬಾರಿಯೂ ಕಾಳುಮೆಣಸು ಕೊರತೆಯ ನಿರೀಕ್ಷೆ ಇದೆ. ಹೀಗಾಗಿ ಧಾರಣೆ ಏರಿಕೆಯಾಗಬಹುದು ಎಂದು ಮಾರುಕಟ್ಟೆ ವಲಯ ಅಭಿಪ್ರಾಯಪಟ್ಟಿದೆ. ವಿಯೆಟ್ನಾಂ, ಬ್ರೆಜಿಲ್‌ ಸೇರಿದಂತೆ ಕಾಳುಮೆಣಸು ಬೆಳೆಯುವ ದೇಶಗಳಲ್ಲಿ ಈಗಾಗಲೇ ಇದೇ ಅಭಿಪ್ರಾಯ ವ್ಯಕ್ತವಾಗಿದೆ. ಇಳುವರಿ ಕೊರತೆ-ಬೇಡಿಕೆ ಹೆಚ್ಚಿದೆ.  ಹೀಗಾಗಿ ಕೆಲವು ವ್ಯಾಪಾರಿಗಳು ಕಾಳುಮೆಣಸಿನ ಜೊತೆ ಕಾಫಿ ಖರೀದಿಯತ್ತಲೂ ಆಸಕ್ತಿ ಹೊಂದಿದ್ದಾರೆ. ಕಾಫಿ ಉತ್ಪನ್ನಗಳ ಮೇಲೆ ಹೂಡಿಕೆ ಮಾಡಲು ತೊಡಗಿದ್ದಾರೆ.

ಮಾರುಕಟ್ಟೆ ತಜ್ಞರ ಪ್ರಕಾರ, ಮುಂಬರುವ ದಿನಗಳಲ್ಲಿ ಹವಾಮಾನದ ಕಾರಣದಿಂದಲೇ ಕಾಳುಮೆಣಸು ಇಳುವರಿ ಕಡಿಮೆಯಾಗಿ ಬೇಡಿಕೆ ಹೆಚ್ಚಲಿದೆ. ಹೀಗಾಗಿ ಭಾರತದಲ್ಲೂ ಕಾಳುಮೆಣಸು ಧಾರಣೆ ಏರಿಕೆಯ ನಿರೀಕ್ಷೆ ಇದೆ. ಆಮದು ತಡೆಗೆ ಸೂಕ್ತ ಕ್ರಮಗಳು ಆದರೆ ಕನಿಷ್ಟ 700 ರೂಪಾಯಿ ತಲಪುವ ಸಾಧ್ಯತೆ ಇದೆ ಎನ್ನುತ್ತದೆ ಮಾರುಕಟ್ಟೆ ವಲಯ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

7 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

7 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

8 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

10 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

22 hours ago