ಭಾರತಕ್ಕೆ #Bharat ಈ ಬಾರಿ ಜಿ20 ಶೃಂಗ ಸಭೆಯ ನೇತೃತ್ವದ ಸಾರಥ್ಯ ಸಿಕ್ಕಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಈಗಾಗಲೇ ಭಾರಿ ತಯಾರಿ ನಡೆದಿದೆ. ವಿಶ್ವದ ಘಟಾನುಘಟಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಭಾರತಕ್ಕೆ ಆಗಮಿಸಿರುವ ಅಮೆರಿಕದ#America ಅಧ್ಯಕ್ಷ ಜೋ ಬೈಡನ್ #JoeBiden ಜಿ20 ನಾಯಕರ ಶೃಂಗಸಭೆಗೂ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ #NarendraModi ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಈ ವೇಳೆ ಅವರು ರಕ್ಷಣಾ ತಂತ್ರಜ್ಞಾನ ಪಾಲುದಾರಿಕೆಯ ವಿಷಯದಲ್ಲಿ ನಿಕಟ ಸಹಕಾರದ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಜತೆಗೆ, ಈಗಾಗಲೇ ಮಾಡಿಕೊಂಡಿರುವ ಒಪ್ಪಂದಗಳ ಪ್ರಗತಿಯನ್ನು ಮೌಲ್ಯಮಾಪನ ಮಾಡುವ ಸಾಧ್ಯತೆಯಿದೆ ಎಂದು ತಜ್ಞರು ತಿಳಿಸಿದ್ದಾರೆ. ಜೂನ್ನಲ್ಲಿ ಮೋದಿಯವರು ಅಮೆರಿಕಕ್ಕೆ ಭೇಟಿ ನೀಡಿದ ನಂತರದ ಮೊದಲ ದ್ವಿಪಕ್ಷೀಯ ಸಭೆ ಇದಾಗಿದ್ದು, ಮಹತ್ವದ್ದಾಗಿದೆ ಎಂದು ಮೂಲಗಳು ಹೇಳಿವೆ.
ಜೂನ್ನಲ್ಲಿ ನಡೆದಿದ್ದ ದ್ವಿಪಕ್ಷೀಯ ಸಭೆಯಲ್ಲಿ ಜೆಟ್ ಎಂಜಿನ್ ತಂತ್ರಜ್ಞಾನವನ್ನು ಭಾರತಕ್ಕೆ ವರ್ಗಾಯಿಸುವಂತಹ ನಿರ್ಣಾಯಕ ನಿರ್ಧಾರ ಕೈಗೊಳ್ಳಲಾಗಿತ್ತು. ಜತೆಗೆ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಪಾಲುದಾರಿಕೆಗೆ ಸಂಬಂಧಿಸಿದಂತೆ ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿತ್ತು. ಅವುಗಳಿಗೆ ಸಂಬಂಧಿಸಿ ಈವರೆಗೆ ಏನೇನು ಪ್ರಗತಿಯಾಗಿದೆ ಎಂಬ ಬಗ್ಗೆ ಉಭಯ ನಾಯಕರು ಈಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಚರ್ಚಿಸುವ ನಿರೀಕ್ಷೆ ಇದೆ. ಜತೆಗೆ, ರಕ್ಷಣಾ ತಂತ್ರಜ್ಞಾನ ಕ್ಷೇತ್ರದಲ್ಲಿ ಪಾಲುದಾರಿಕೆ ಸೇರಿದಂತೆ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಮುಂದುವರಿಸುವುದು ಹೇಗೆಂಬ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ಭಾರತೀಯ ಮಾಜಿ ರಾಜತಾಂತ್ರಿಕ ಅರುಣ್ ಸಿಂಗ್ ತಿಳಿಸಿರುವುದಾಗಿ ‘ಮನಿ ಕಂಟ್ರೋಲ್’ ವರದಿ ಮಾಡಿದೆ. ಸಿಂಗ್ ಅವರು 2015-16ರ ಅವಧಿಯಲ್ಲಿ ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು.
ಈ ದ್ವಿಪಕ್ಷೀಯ ಸಭೆ ಬಹಳ ಮಹತ್ವದ್ದಾಗಿದೆ. ಬೈಡನ್ ಜಿ20 ಗಾಗಿ ಬರುತ್ತಿದ್ದಾರೆ. ಆದರೆ ಅವರು ಮತ್ತು ಭಾರತದ ಪ್ರಧಾನ ಮಂತ್ರಿ ದ್ವಿಪಕ್ಷೀಯ ಬಾಂಧವ್ಯದ ಬಗ್ಗೆ ಚರ್ಚಿಸಲು ಎದುರುನೋಡುತ್ತಿದ್ದಾರೆ ಎಂಬ ಅಂಶವು ಗಮನಾರ್ಹವಾಗಿದೆ ಎಂದು ಸಿಂಗ್ ಹೇಳಿದ್ದಾರೆ. ಡಿಜಿಟಲ್ ಕ್ರಾಂತಿಯನ್ನು ಎದುರಿಸುವ ನಿಟ್ಟಿನಲ್ಲಿ ಒಗ್ಗೂಡಿದ ವಿಶ್ವದ ಎರಡು ಅತ್ಯಂತ ದೊಡ್ಡ ಮತ್ತು ಶಕ್ತಿಶಾಲಿ ಪ್ರಜಾಪ್ರಭುತ್ವ ದೇಶಗಳಾಗಿವೆ ಅಮೆರಿಕ ಮತ್ತು ಭಾರತ ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ಜಿ20 ಮತ್ತು ಬೈಡನ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯು ಸಂಬಂಧವನ್ನು ಭದ್ರಪಡಿಸಲು, ವಿಚಾರ ವಿನಿಮಯ ಮಾಡಿಕೊಳ್ಳಲು, ಭದ್ರತಾ ಪಾಲುದಾರಿಕೆಯನ್ನು ಹೆಚ್ಚಿಸಲು ಮತ್ತು ಒಟ್ಟಿಗೆ ಕೆಲಸ ಮಾಡಲು ಬಹಳ ಮುಖ್ಯವಾಗಿದೆ. ಡಿಜಿಟಲ್ ಕ್ರಾಂತಿಯ ಈ ಸಂದರ್ಭದಲ್ಲಿ ಚೀನಾ ವಿರುದ್ಧ ಅಮೆರಿಕ ಮತ್ತು ಭಾರತ ಒಟ್ಟಿಗೆ ಇರುವುದು ಬಹು ಮುಖ್ಯ. ಭಾರತದ ಡಿಜಿಟಲ್ ಕ್ರಾಂತಿಯ ಜೊತೆ ಪಾಲುದಾರಿಕೆಗೆ ಅಮೆರಿಕ ಬಿಟ್ಟರೆ ಅಷ್ಟೊಂದು ಉತ್ತಮವಾದ ಬೇರೆ ದೇಶವಿಲ್ಲ ಎಂದು ಮಣಿಪಾಲ್ ಗ್ಲೋಬಲ್ ಎಜುಕೇಶನ್ನ ಅಧ್ಯಕ್ಷ ಟಿವಿ ಮೋಹನ್ದಾಸ್ ಪೈ ಅಭಿಪ್ರಾಯಪಟ್ಟಿರುವುದಾಗಿ ವರದಿ ಉಲ್ಲೇಖಿಸಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…