Advertisement
MIRROR FOCUS

#G20India2023 | ಜಿ20 ಶೃಂಗ ಸಭೆಗೆ ಆಗಮಿಸುತ್ತಿರುವ ವಿಶ್ವದ ಘಟಾನುಘಟಿ ನಾಯಕರು | ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಸಹಭಾಗಿತ್ವದ ಬಗ್ಗೆ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬೈಡನ್ ಚರ್ಚೆ ಸಾಧ್ಯತೆ

Share

ಭಾರತಕ್ಕೆ #Bharat ಈ ಬಾರಿ ಜಿ20 ಶೃಂಗ ಸಭೆಯ ನೇತೃತ್ವದ ಸಾರಥ್ಯ ಸಿಕ್ಕಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಈಗಾಗಲೇ ಭಾರಿ ತಯಾರಿ ನಡೆದಿದೆ. ವಿಶ್ವದ ಘಟಾನುಘಟಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಭಾರತಕ್ಕೆ ಆಗಮಿಸಿರುವ ಅಮೆರಿಕದ#America ಅಧ್ಯಕ್ಷ  ಜೋ ಬೈಡನ್ #JoeBiden ಜಿ20 ನಾಯಕರ ಶೃಂಗಸಭೆಗೂ  ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ #NarendraModi ಅವರ ಜೊತೆ  ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಈ ವೇಳೆ ಅವರು ರಕ್ಷಣಾ ತಂತ್ರಜ್ಞಾನ ಪಾಲುದಾರಿಕೆಯ ವಿಷಯದಲ್ಲಿ ನಿಕಟ ಸಹಕಾರದ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಜತೆಗೆ, ಈಗಾಗಲೇ ಮಾಡಿಕೊಂಡಿರುವ ಒಪ್ಪಂದಗಳ ಪ್ರಗತಿಯನ್ನು ಮೌಲ್ಯಮಾಪನ ಮಾಡುವ ಸಾಧ್ಯತೆಯಿದೆ ಎಂದು ತಜ್ಞರು ತಿಳಿಸಿದ್ದಾರೆ. ಜೂನ್‌ನಲ್ಲಿ ಮೋದಿಯವರು ಅಮೆರಿಕಕ್ಕೆ ಭೇಟಿ ನೀಡಿದ ನಂತರದ ಮೊದಲ ದ್ವಿಪಕ್ಷೀಯ ಸಭೆ ಇದಾಗಿದ್ದು, ಮಹತ್ವದ್ದಾಗಿದೆ ಎಂದು ಮೂಲಗಳು ಹೇಳಿವೆ.

ಜೂನ್​ನಲ್ಲಿ ನಡೆದಿದ್ದ ದ್ವಿಪಕ್ಷೀಯ ಸಭೆಯಲ್ಲಿ ಜೆಟ್ ಎಂಜಿನ್ ತಂತ್ರಜ್ಞಾನವನ್ನು ಭಾರತಕ್ಕೆ ವರ್ಗಾಯಿಸುವಂತಹ ನಿರ್ಣಾಯಕ ನಿರ್ಧಾರ ಕೈಗೊಳ್ಳಲಾಗಿತ್ತು. ಜತೆಗೆ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಪಾಲುದಾರಿಕೆಗೆ ಸಂಬಂಧಿಸಿದಂತೆ ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿತ್ತು. ಅವುಗಳಿಗೆ ಸಂಬಂಧಿಸಿ ಈವರೆಗೆ ಏನೇನು ಪ್ರಗತಿಯಾಗಿದೆ ಎಂಬ ಬಗ್ಗೆ ಉಭಯ ನಾಯಕರು ಈಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಚರ್ಚಿಸುವ ನಿರೀಕ್ಷೆ ಇದೆ. ಜತೆಗೆ, ರಕ್ಷಣಾ ತಂತ್ರಜ್ಞಾನ ಕ್ಷೇತ್ರದಲ್ಲಿ ಪಾಲುದಾರಿಕೆ ಸೇರಿದಂತೆ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಮುಂದುವರಿಸುವುದು ಹೇಗೆಂಬ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ಭಾರತೀಯ ಮಾಜಿ ರಾಜತಾಂತ್ರಿಕ ಅರುಣ್ ಸಿಂಗ್ ತಿಳಿಸಿರುವುದಾಗಿ ‘ಮನಿ ಕಂಟ್ರೋಲ್’ ವರದಿ ಮಾಡಿದೆ. ಸಿಂಗ್ ಅವರು 2015-16ರ ಅವಧಿಯಲ್ಲಿ ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು.

ಈ ದ್ವಿಪಕ್ಷೀಯ ಸಭೆ ಬಹಳ ಮಹತ್ವದ್ದಾಗಿದೆ. ಬೈಡನ್ ಜಿ20 ಗಾಗಿ ಬರುತ್ತಿದ್ದಾರೆ. ಆದರೆ ಅವರು ಮತ್ತು ಭಾರತದ ಪ್ರಧಾನ ಮಂತ್ರಿ ದ್ವಿಪಕ್ಷೀಯ ಬಾಂಧವ್ಯದ ಬಗ್ಗೆ ಚರ್ಚಿಸಲು ಎದುರುನೋಡುತ್ತಿದ್ದಾರೆ ಎಂಬ ಅಂಶವು ಗಮನಾರ್ಹವಾಗಿದೆ ಎಂದು ಸಿಂಗ್ ಹೇಳಿದ್ದಾರೆ. ಡಿಜಿಟಲ್ ಕ್ರಾಂತಿಯನ್ನು ಎದುರಿಸುವ ನಿಟ್ಟಿನಲ್ಲಿ ಒಗ್ಗೂಡಿದ ವಿಶ್ವದ ಎರಡು ಅತ್ಯಂತ ದೊಡ್ಡ ಮತ್ತು ಶಕ್ತಿಶಾಲಿ ಪ್ರಜಾಪ್ರಭುತ್ವ ದೇಶಗಳಾಗಿವೆ ಅಮೆರಿಕ ಮತ್ತು ಭಾರತ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಜಿ20 ಮತ್ತು ಬೈಡನ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯು ಸಂಬಂಧವನ್ನು ಭದ್ರಪಡಿಸಲು, ವಿಚಾರ ವಿನಿಮಯ ಮಾಡಿಕೊಳ್ಳಲು, ಭದ್ರತಾ ಪಾಲುದಾರಿಕೆಯನ್ನು ಹೆಚ್ಚಿಸಲು ಮತ್ತು ಒಟ್ಟಿಗೆ ಕೆಲಸ ಮಾಡಲು ಬಹಳ ಮುಖ್ಯವಾಗಿದೆ. ಡಿಜಿಟಲ್ ಕ್ರಾಂತಿಯ ಈ ಸಂದರ್ಭದಲ್ಲಿ ಚೀನಾ ವಿರುದ್ಧ ಅಮೆರಿಕ ಮತ್ತು ಭಾರತ ಒಟ್ಟಿಗೆ ಇರುವುದು ಬಹು ಮುಖ್ಯ. ಭಾರತದ ಡಿಜಿಟಲ್ ಕ್ರಾಂತಿಯ ಜೊತೆ ಪಾಲುದಾರಿಕೆಗೆ ಅಮೆರಿಕ ಬಿಟ್ಟರೆ ಅಷ್ಟೊಂದು ಉತ್ತಮವಾದ ಬೇರೆ ದೇಶವಿಲ್ಲ ಎಂದು ಮಣಿಪಾಲ್ ಗ್ಲೋಬಲ್ ಎಜುಕೇಶನ್‌ನ ಅಧ್ಯಕ್ಷ ಟಿವಿ ಮೋಹನ್‌ದಾಸ್ ಪೈ ಅಭಿಪ್ರಾಯಪಟ್ಟಿರುವುದಾಗಿ ವರದಿ ಉಲ್ಲೇಖಿಸಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

22 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago