Advertisement
ಸುದ್ದಿಗಳು

ಗದಗದಲ್ಲಿ ರೈತರಿಂದ ಕಡಲೆ ಖರೀದಿ ಆರಂಭ : ಪ್ರತಿ ಕ್ವಿಂಟಲ್‌ಗೆ ₹5,875 ಬೆಂಬಲ ಬೆಲೆ ನಿಗದಿ

Share

2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಗದಗ ಜಿಲ್ಲೆಯ ರೈತರಿಂದ ಎಫ್‌ಎಕ್ಯೂ (FAQ) ಗುಣಮಟ್ಟದ ಕಡಲೆ ಹುಟ್ಟುವಳಿ ಖರೀದಿ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ಕ್ವಿಂಟಾಲ್ ಕಡಲೆಗೆ ₹5,875 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದ್ದಾರೆ.

ಕಡಲೆ ಹುಟ್ಟುವಳಿಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸುವ ಕುರಿತು ಜರುಗಿದ ವಿಶೇಷ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಗಳಂತೆ ಜಿಲ್ಲೆಯ ರೈತರಿಗೆ ನಿಗದಿತ ಪ್ರಮಾಣದಲ್ಲಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಈ ಯೋಜನೆಯಡಿ FAQ (Fair Average Quality) ಮಟ್ಟದ ಕಡಲೆ ಕಾಳುಗಳಿಗೆ ಮಾತ್ರ ಖರೀದಿ ನಡೆಯಲಿದ್ದು, ಉತ್ತಮ ಗುಣಮಟ್ಟದ ಹುಟ್ಟುವಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ಸರ್ಕಾರದ ಮಾರ್ಗಸೂಚಿಗಳನ್ವಯ ಪ್ರತಿ ರೈತರಿಂದ ಎಕರೆಗೆ 4 ಕ್ವಿಂಟಲ್, ಗರಿಷ್ಟವಾಗಿ 40 ಕ್ವಿಂಟಲ್‌ವರೆಗೆ FAQ ಗುಣಮಟ್ಟದ ಕಡಲೆ ಖರೀದಿಸಲು ಅವಕಾಶ ನೀಡಲಾಗಿದೆ. ಬೆಂಬಲ ಬೆಲೆ ಯೋಜನೆಯ ಮೂಲಕ ರೈತರಿಗೆ ಮಾರುಕಟ್ಟೆ ಬೆಲೆ ಕುಸಿತದ ಹೊತ್ತಲ್ಲೂ ಸ್ಥಿರ ಆದಾಯ ಸಿಗಲಿದೆ. ಕಡಲೆ ಬೆಳೆಗಾರರಿಗೆ ಇದು ಮಹತ್ವದ ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

2 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

4 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

8 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

12 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

22 hours ago