2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಗದಗ ಜಿಲ್ಲೆಯ ರೈತರಿಂದ ಎಫ್ಎಕ್ಯೂ (FAQ) ಗುಣಮಟ್ಟದ ಕಡಲೆ ಹುಟ್ಟುವಳಿ ಖರೀದಿ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ಕ್ವಿಂಟಾಲ್ ಕಡಲೆಗೆ ₹5,875 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದ್ದಾರೆ.
ಕಡಲೆ ಹುಟ್ಟುವಳಿಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸುವ ಕುರಿತು ಜರುಗಿದ ವಿಶೇಷ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಗಳಂತೆ ಜಿಲ್ಲೆಯ ರೈತರಿಗೆ ನಿಗದಿತ ಪ್ರಮಾಣದಲ್ಲಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಈ ಯೋಜನೆಯಡಿ FAQ (Fair Average Quality) ಮಟ್ಟದ ಕಡಲೆ ಕಾಳುಗಳಿಗೆ ಮಾತ್ರ ಖರೀದಿ ನಡೆಯಲಿದ್ದು, ಉತ್ತಮ ಗುಣಮಟ್ಟದ ಹುಟ್ಟುವಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ಸರ್ಕಾರದ ಮಾರ್ಗಸೂಚಿಗಳನ್ವಯ ಪ್ರತಿ ರೈತರಿಂದ ಎಕರೆಗೆ 4 ಕ್ವಿಂಟಲ್, ಗರಿಷ್ಟವಾಗಿ 40 ಕ್ವಿಂಟಲ್ವರೆಗೆ FAQ ಗುಣಮಟ್ಟದ ಕಡಲೆ ಖರೀದಿಸಲು ಅವಕಾಶ ನೀಡಲಾಗಿದೆ. ಬೆಂಬಲ ಬೆಲೆ ಯೋಜನೆಯ ಮೂಲಕ ರೈತರಿಗೆ ಮಾರುಕಟ್ಟೆ ಬೆಲೆ ಕುಸಿತದ ಹೊತ್ತಲ್ಲೂ ಸ್ಥಿರ ಆದಾಯ ಸಿಗಲಿದೆ. ಕಡಲೆ ಬೆಳೆಗಾರರಿಗೆ ಇದು ಮಹತ್ವದ ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…