Advertisement
ಸುದ್ದಿಗಳು

ಗದಗದಲ್ಲಿ ರೈತರಿಂದ ಕಡಲೆ ಖರೀದಿ ಆರಂಭ : ಪ್ರತಿ ಕ್ವಿಂಟಲ್‌ಗೆ ₹5,875 ಬೆಂಬಲ ಬೆಲೆ ನಿಗದಿ

Share

2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಗದಗ ಜಿಲ್ಲೆಯ ರೈತರಿಂದ ಎಫ್‌ಎಕ್ಯೂ (FAQ) ಗುಣಮಟ್ಟದ ಕಡಲೆ ಹುಟ್ಟುವಳಿ ಖರೀದಿ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ಕ್ವಿಂಟಾಲ್ ಕಡಲೆಗೆ ₹5,875 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದ್ದಾರೆ.

ಕಡಲೆ ಹುಟ್ಟುವಳಿಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸುವ ಕುರಿತು ಜರುಗಿದ ವಿಶೇಷ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಗಳಂತೆ ಜಿಲ್ಲೆಯ ರೈತರಿಗೆ ನಿಗದಿತ ಪ್ರಮಾಣದಲ್ಲಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಈ ಯೋಜನೆಯಡಿ FAQ (Fair Average Quality) ಮಟ್ಟದ ಕಡಲೆ ಕಾಳುಗಳಿಗೆ ಮಾತ್ರ ಖರೀದಿ ನಡೆಯಲಿದ್ದು, ಉತ್ತಮ ಗುಣಮಟ್ಟದ ಹುಟ್ಟುವಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ಸರ್ಕಾರದ ಮಾರ್ಗಸೂಚಿಗಳನ್ವಯ ಪ್ರತಿ ರೈತರಿಂದ ಎಕರೆಗೆ 4 ಕ್ವಿಂಟಲ್, ಗರಿಷ್ಟವಾಗಿ 40 ಕ್ವಿಂಟಲ್‌ವರೆಗೆ FAQ ಗುಣಮಟ್ಟದ ಕಡಲೆ ಖರೀದಿಸಲು ಅವಕಾಶ ನೀಡಲಾಗಿದೆ. ಬೆಂಬಲ ಬೆಲೆ ಯೋಜನೆಯ ಮೂಲಕ ರೈತರಿಗೆ ಮಾರುಕಟ್ಟೆ ಬೆಲೆ ಕುಸಿತದ ಹೊತ್ತಲ್ಲೂ ಸ್ಥಿರ ಆದಾಯ ಸಿಗಲಿದೆ. ಕಡಲೆ ಬೆಳೆಗಾರರಿಗೆ ಇದು ಮಹತ್ವದ ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

4 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

15 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

19 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

20 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

22 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

23 hours ago