Advertisement
ಸುದ್ದಿಗಳು

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

Share

ಗದಗ ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆಯ ಅವಧಿಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ. ಮುಂದಿನ 3 ರಿಂದ 6 ದಿನಗಳವರೆಗೆ ತೀವ್ರ ಬಿಸಿಗಾಳಿಯ (Heat Wave) ಪ್ರಭಾವ ಕಂಡುಬರಲಿದ್ದು, ಸಾರ್ವಜನಿಕರು ವಿಶೇಷ ಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವಂತೆ, ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರು ಹೆಚ್ಚು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದ್ದಾರೆ.

ತೀವ್ರ ಬಿಸಿಲಿನ ಪರಿಣಾಮವಾಗಿ ಉಂಟಾಗುವ ನಿರ್ಜಲೀಕರಣ (Dehydration), ಬಳಲಿಕೆ ಹಾಗೂ ಶಾಖಾಘಾತ (Sunstroke) ತಡೆಗಟ್ಟಲು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು :

  • ಬಾಯಾರಿಕೆ ಇಲ್ಲದಿದ್ದರೂ ಸಹ ನಿಯಮಿತವಾಗಿ ಹೆಚ್ಚು ನೀರು ಕುಡಿಯಿರಿ
  • ಹೊರಗೆ ಹೋಗುವಾಗ ಹಗುರ, ತಿಳಿಬಣ್ಣದ ಮತ್ತು ಸಡಿಲವಾದ ಹತ್ತಿ ಬಟ್ಟೆ ಧರಿಸಿ
  • ಬಿಸಿಲಿನಿಂದ ರಕ್ಷಣೆಗಾಗಿ ಛತ್ರಿ, ಟೋಪಿ, ಕನ್ನಡಕ ಬಳಸಿ
  • ಮಧ್ಯಾಹ್ನದ ಗರಿಷ್ಠ ಬಿಸಿಲಿನ ವೇಳೆಯಲ್ಲಿ ಹೊರಗಡೆ ಹೋಗುವುದನ್ನು ತಪ್ಪಿಸಿ
  • ಶರೀರದಲ್ಲಿ ನೀರಿನ ಮಟ್ಟವನ್ನು ಕಾಪಾಡಿಕೊಳ್ಳಲು ಹಣ್ಣು ಮತ್ತು ದ್ರವ ಪದಾರ್ಥಗಳನ್ನು ಸೇವಿಸಿ

ಈ ಬಾರಿ ಬೇಸಿಗೆಯಲ್ಲಿ ಗದಗ ಜಿಲ್ಲೆಯಲ್ಲಿ ತಾಪಮಾನ ಏರಿಕೆಯಾಗುತ್ತಿರುವುದು ಸ್ಪಷ್ಟವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಹವಾಮಾನದಲ್ಲಿ ಕಂಡುಬರುವ ಈ ಬದಲಾವಣೆಗಳು ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Gadag district is expected to experience higher-than-normal temperatures during the current summer. District Commissioner C.N. Sridhar has warned of a heat wave lasting 3 to 6 days and advised people, especially children, the elderly, and the sick, to take precautions. Authorities urge citizens to stay hydrated, avoid peak heat hours, and follow safety guidelines to prevent dehydration and sunstroke.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

4 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

5 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

5 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

10 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

13 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

17 hours ago