ಗದಗದ ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ

November 25, 2024
7:33 AM

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ  ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಸಾಂಸ್ಕೃತಿಕವಾಗಿ, ಪಾರಂಪರಿಕವಾಗಿ, ಶ್ರೀಮಂತವಾಗಿರುವ ಲಕ್ಕುಂಡಿ, ಲೊಕ್ಕಿಗುಂಡಿ ಎಂಬ ಹೆಸರಿನಿಂದ ರಾಮಾಯಣ, ಮಹಾಭಾರತದ ಕಾಲದಿಂದಲೂ ಪ್ರಸಿದ್ಧಿ ಹೊಂದಿತ್ತು. ಇಲ್ಲಿಯವರೆಗೆ ಲಕ್ಕುಂಡಿಯ ಇತಿಹಾಸ, ಶಿಲ್ಪಕಲೆಗಳು, ಶಾಸನಗಳನ್ನು ನಿರ್ಲಕ್ಷ್ಯ ಆಗಿದ್ದವು. ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸಬೇಕಿದೆ. ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 101 ಬಾವಿ, 101 ದೇವಸ್ಥಾನಗಳ ಇತಿಹಾಸ ಹೊಂದಿರುವ ಲಕ್ಕುಂಡಿಯಲ್ಲಿ ಪ್ರಾಚ್ಯಾಶೇಷಗಳ ಸಂಗ್ರಹಣೆ ಮೂಲಕ ಹುದುಗಿ ಹೋಗಿರುವ ದೇವಸ್ಥಾನ ಹಾಗೂ ಬಾವಿಗಳ ಅನ್ವೇಷಣೆ ಹಾಗೂ ಮರುಸೃಷ್ಟಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.  ಲಕ್ಕುಂಡಿಯಲ್ಲಿ ಕೈಗೊಂಡಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆ ರಾಜ್ಯಕ್ಕೆ ದಿಕ್ಸೂಚಿಯಾಗಬೇಕು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror