ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಸಾಂಸ್ಕೃತಿಕವಾಗಿ, ಪಾರಂಪರಿಕವಾಗಿ, ಶ್ರೀಮಂತವಾಗಿರುವ ಲಕ್ಕುಂಡಿ, ಲೊಕ್ಕಿಗುಂಡಿ ಎಂಬ ಹೆಸರಿನಿಂದ ರಾಮಾಯಣ, ಮಹಾಭಾರತದ ಕಾಲದಿಂದಲೂ ಪ್ರಸಿದ್ಧಿ ಹೊಂದಿತ್ತು. ಇಲ್ಲಿಯವರೆಗೆ ಲಕ್ಕುಂಡಿಯ ಇತಿಹಾಸ, ಶಿಲ್ಪಕಲೆಗಳು, ಶಾಸನಗಳನ್ನು ನಿರ್ಲಕ್ಷ್ಯ ಆಗಿದ್ದವು. ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸಬೇಕಿದೆ. ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 101 ಬಾವಿ, 101 ದೇವಸ್ಥಾನಗಳ ಇತಿಹಾಸ ಹೊಂದಿರುವ ಲಕ್ಕುಂಡಿಯಲ್ಲಿ ಪ್ರಾಚ್ಯಾಶೇಷಗಳ ಸಂಗ್ರಹಣೆ ಮೂಲಕ ಹುದುಗಿ ಹೋಗಿರುವ ದೇವಸ್ಥಾನ ಹಾಗೂ ಬಾವಿಗಳ ಅನ್ವೇಷಣೆ ಹಾಗೂ ಮರುಸೃಷ್ಟಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಲಕ್ಕುಂಡಿಯಲ್ಲಿ ಕೈಗೊಂಡಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆ ರಾಜ್ಯಕ್ಕೆ ದಿಕ್ಸೂಚಿಯಾಗಬೇಕು ಎಂದು ಹೇಳಿದ್ದಾರೆ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…