ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಸಾಂಸ್ಕೃತಿಕವಾಗಿ, ಪಾರಂಪರಿಕವಾಗಿ, ಶ್ರೀಮಂತವಾಗಿರುವ ಲಕ್ಕುಂಡಿ, ಲೊಕ್ಕಿಗುಂಡಿ ಎಂಬ ಹೆಸರಿನಿಂದ ರಾಮಾಯಣ, ಮಹಾಭಾರತದ ಕಾಲದಿಂದಲೂ ಪ್ರಸಿದ್ಧಿ ಹೊಂದಿತ್ತು. ಇಲ್ಲಿಯವರೆಗೆ ಲಕ್ಕುಂಡಿಯ ಇತಿಹಾಸ, ಶಿಲ್ಪಕಲೆಗಳು, ಶಾಸನಗಳನ್ನು ನಿರ್ಲಕ್ಷ್ಯ ಆಗಿದ್ದವು. ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸಬೇಕಿದೆ. ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 101 ಬಾವಿ, 101 ದೇವಸ್ಥಾನಗಳ ಇತಿಹಾಸ ಹೊಂದಿರುವ ಲಕ್ಕುಂಡಿಯಲ್ಲಿ ಪ್ರಾಚ್ಯಾಶೇಷಗಳ ಸಂಗ್ರಹಣೆ ಮೂಲಕ ಹುದುಗಿ ಹೋಗಿರುವ ದೇವಸ್ಥಾನ ಹಾಗೂ ಬಾವಿಗಳ ಅನ್ವೇಷಣೆ ಹಾಗೂ ಮರುಸೃಷ್ಟಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಲಕ್ಕುಂಡಿಯಲ್ಲಿ ಕೈಗೊಂಡಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆ ರಾಜ್ಯಕ್ಕೆ ದಿಕ್ಸೂಚಿಯಾಗಬೇಕು ಎಂದು ಹೇಳಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…