ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಸಾಂಸ್ಕೃತಿಕವಾಗಿ, ಪಾರಂಪರಿಕವಾಗಿ, ಶ್ರೀಮಂತವಾಗಿರುವ ಲಕ್ಕುಂಡಿ, ಲೊಕ್ಕಿಗುಂಡಿ ಎಂಬ ಹೆಸರಿನಿಂದ ರಾಮಾಯಣ, ಮಹಾಭಾರತದ ಕಾಲದಿಂದಲೂ ಪ್ರಸಿದ್ಧಿ ಹೊಂದಿತ್ತು. ಇಲ್ಲಿಯವರೆಗೆ ಲಕ್ಕುಂಡಿಯ ಇತಿಹಾಸ, ಶಿಲ್ಪಕಲೆಗಳು, ಶಾಸನಗಳನ್ನು ನಿರ್ಲಕ್ಷ್ಯ ಆಗಿದ್ದವು. ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸಬೇಕಿದೆ. ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 101 ಬಾವಿ, 101 ದೇವಸ್ಥಾನಗಳ ಇತಿಹಾಸ ಹೊಂದಿರುವ ಲಕ್ಕುಂಡಿಯಲ್ಲಿ ಪ್ರಾಚ್ಯಾಶೇಷಗಳ ಸಂಗ್ರಹಣೆ ಮೂಲಕ ಹುದುಗಿ ಹೋಗಿರುವ ದೇವಸ್ಥಾನ ಹಾಗೂ ಬಾವಿಗಳ ಅನ್ವೇಷಣೆ ಹಾಗೂ ಮರುಸೃಷ್ಟಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಲಕ್ಕುಂಡಿಯಲ್ಲಿ ಕೈಗೊಂಡಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆ ರಾಜ್ಯಕ್ಕೆ ದಿಕ್ಸೂಚಿಯಾಗಬೇಕು ಎಂದು ಹೇಳಿದ್ದಾರೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…