ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಸಾಂಸ್ಕೃತಿಕವಾಗಿ, ಪಾರಂಪರಿಕವಾಗಿ, ಶ್ರೀಮಂತವಾಗಿರುವ ಲಕ್ಕುಂಡಿ, ಲೊಕ್ಕಿಗುಂಡಿ ಎಂಬ ಹೆಸರಿನಿಂದ ರಾಮಾಯಣ, ಮಹಾಭಾರತದ ಕಾಲದಿಂದಲೂ ಪ್ರಸಿದ್ಧಿ ಹೊಂದಿತ್ತು. ಇಲ್ಲಿಯವರೆಗೆ ಲಕ್ಕುಂಡಿಯ ಇತಿಹಾಸ, ಶಿಲ್ಪಕಲೆಗಳು, ಶಾಸನಗಳನ್ನು ನಿರ್ಲಕ್ಷ್ಯ ಆಗಿದ್ದವು. ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸಬೇಕಿದೆ. ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 101 ಬಾವಿ, 101 ದೇವಸ್ಥಾನಗಳ ಇತಿಹಾಸ ಹೊಂದಿರುವ ಲಕ್ಕುಂಡಿಯಲ್ಲಿ ಪ್ರಾಚ್ಯಾಶೇಷಗಳ ಸಂಗ್ರಹಣೆ ಮೂಲಕ ಹುದುಗಿ ಹೋಗಿರುವ ದೇವಸ್ಥಾನ ಹಾಗೂ ಬಾವಿಗಳ ಅನ್ವೇಷಣೆ ಹಾಗೂ ಮರುಸೃಷ್ಟಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಲಕ್ಕುಂಡಿಯಲ್ಲಿ ಕೈಗೊಂಡಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆ ರಾಜ್ಯಕ್ಕೆ ದಿಕ್ಸೂಚಿಯಾಗಬೇಕು ಎಂದು ಹೇಳಿದ್ದಾರೆ.
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…