ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಸಾಂಸ್ಕೃತಿಕವಾಗಿ, ಪಾರಂಪರಿಕವಾಗಿ, ಶ್ರೀಮಂತವಾಗಿರುವ ಲಕ್ಕುಂಡಿ, ಲೊಕ್ಕಿಗುಂಡಿ ಎಂಬ ಹೆಸರಿನಿಂದ ರಾಮಾಯಣ, ಮಹಾಭಾರತದ ಕಾಲದಿಂದಲೂ ಪ್ರಸಿದ್ಧಿ ಹೊಂದಿತ್ತು. ಇಲ್ಲಿಯವರೆಗೆ ಲಕ್ಕುಂಡಿಯ ಇತಿಹಾಸ, ಶಿಲ್ಪಕಲೆಗಳು, ಶಾಸನಗಳನ್ನು ನಿರ್ಲಕ್ಷ್ಯ ಆಗಿದ್ದವು. ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸಬೇಕಿದೆ. ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 101 ಬಾವಿ, 101 ದೇವಸ್ಥಾನಗಳ ಇತಿಹಾಸ ಹೊಂದಿರುವ ಲಕ್ಕುಂಡಿಯಲ್ಲಿ ಪ್ರಾಚ್ಯಾಶೇಷಗಳ ಸಂಗ್ರಹಣೆ ಮೂಲಕ ಹುದುಗಿ ಹೋಗಿರುವ ದೇವಸ್ಥಾನ ಹಾಗೂ ಬಾವಿಗಳ ಅನ್ವೇಷಣೆ ಹಾಗೂ ಮರುಸೃಷ್ಟಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಲಕ್ಕುಂಡಿಯಲ್ಲಿ ಕೈಗೊಂಡಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆ ರಾಜ್ಯಕ್ಕೆ ದಿಕ್ಸೂಚಿಯಾಗಬೇಕು ಎಂದು ಹೇಳಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…