ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.
ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel