ಸುದ್ದಿಗಳು

ಮಾನವಸಹಿತ ‘ಗಗನಯಾನ’​ ಮೊದಲ ಹಾರಾಟ ಪರೀಕ್ಷೆ ಅಕ್ಟೋಬರ್ 21ಕ್ಕೆ

Share

ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್‌ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ಇಸ್ರೋ ಮಾಹಿತಿ ನೀಡಿದೆ. ಚಂದ್ರಯಾನ, ಸೂರ್ಯಯಾನ ಯೋಜನೆಗಳ ಯಶಸ್ಸಿನ ಮೂಲಕ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಮತ್ತೊಂದು ಮಹತ್ವದ ಯೋಜನೆಗೆ ಸಜ್ಜಾಗುತ್ತಿದೆ.

Advertisement
Advertisement

ಟಿವಿ-ಡಿ1 ಪರೀಕ್ಷಾ ಹಾರಾಟವನ್ನು ಅಕ್ಟೋಬರ್ 21 ರಂದು ಶ್ರೀಹರಿಕೋಟಾದ ಎಸ್‌ಡಿಎಸ್‌ಸಿ-ಎಸ್​ಎಚ್​ಎಆರ್​ನಿಂದ ಬೆಳಿಗ್ಗೆ 7 ರಿಂದ 9 ರವರೆಗೆ ನಿಗದಿಪಡಿಸಲಾಗಿದೆ. ಮಾನವಸಹಿತ ಗಗನಯಾನ ಯೋಜನೆಯ ಪರೀಕ್ಷಾರ್ಥ ಪ್ರಯೋಗವನ್ನು ನಡೆಸುವುದಾಗಿ ಇಸ್ರೋ ಇಂದು ಪ್ರಕಟಿಸಿದೆ. ಇದರಲ್ಲಿ ಮೂವರು ಗಗನಯಾತ್ರಿಗಳು ಹಾರಾಟ ನಡೆಸಲಿದ್ದಾರೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.

ಗಗನಯಾನದಲ್ಲಿ 3 ಸದಸ್ಯರ ತಂಡವನ್ನು 400 ಕಿಮೀ ಮೇಲಿನ ಭೂಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ. ಭಾರತ ತನ್ನ ಈ ಉದ್ದೇಶದಲ್ಲಿ ಯಶಸ್ವಿಯಾದರೆ ಅದನ್ನು ಮಾಡಿದ ನಾಲ್ಕನೇ ರಾಷ್ಟ್ರವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

4 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

7 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

17 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago