Advertisement
ಸುದ್ದಿಗಳು

ಮಾನವಸಹಿತ ‘ಗಗನಯಾನ’​ ಮೊದಲ ಹಾರಾಟ ಪರೀಕ್ಷೆ ಅಕ್ಟೋಬರ್ 21ಕ್ಕೆ

Share

ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್‌ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ಇಸ್ರೋ ಮಾಹಿತಿ ನೀಡಿದೆ. ಚಂದ್ರಯಾನ, ಸೂರ್ಯಯಾನ ಯೋಜನೆಗಳ ಯಶಸ್ಸಿನ ಮೂಲಕ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಮತ್ತೊಂದು ಮಹತ್ವದ ಯೋಜನೆಗೆ ಸಜ್ಜಾಗುತ್ತಿದೆ.

ಟಿವಿ-ಡಿ1 ಪರೀಕ್ಷಾ ಹಾರಾಟವನ್ನು ಅಕ್ಟೋಬರ್ 21 ರಂದು ಶ್ರೀಹರಿಕೋಟಾದ ಎಸ್‌ಡಿಎಸ್‌ಸಿ-ಎಸ್​ಎಚ್​ಎಆರ್​ನಿಂದ ಬೆಳಿಗ್ಗೆ 7 ರಿಂದ 9 ರವರೆಗೆ ನಿಗದಿಪಡಿಸಲಾಗಿದೆ. ಮಾನವಸಹಿತ ಗಗನಯಾನ ಯೋಜನೆಯ ಪರೀಕ್ಷಾರ್ಥ ಪ್ರಯೋಗವನ್ನು ನಡೆಸುವುದಾಗಿ ಇಸ್ರೋ ಇಂದು ಪ್ರಕಟಿಸಿದೆ. ಇದರಲ್ಲಿ ಮೂವರು ಗಗನಯಾತ್ರಿಗಳು ಹಾರಾಟ ನಡೆಸಲಿದ್ದಾರೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.

ಗಗನಯಾನದಲ್ಲಿ 3 ಸದಸ್ಯರ ತಂಡವನ್ನು 400 ಕಿಮೀ ಮೇಲಿನ ಭೂಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ. ಭಾರತ ತನ್ನ ಈ ಉದ್ದೇಶದಲ್ಲಿ ಯಶಸ್ವಿಯಾದರೆ ಅದನ್ನು ಮಾಡಿದ ನಾಲ್ಕನೇ ರಾಷ್ಟ್ರವಾಗಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago