ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ಇಸ್ರೋ ಮಾಹಿತಿ ನೀಡಿದೆ. ಚಂದ್ರಯಾನ, ಸೂರ್ಯಯಾನ ಯೋಜನೆಗಳ ಯಶಸ್ಸಿನ ಮೂಲಕ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಮತ್ತೊಂದು ಮಹತ್ವದ ಯೋಜನೆಗೆ ಸಜ್ಜಾಗುತ್ತಿದೆ.
ಟಿವಿ-ಡಿ1 ಪರೀಕ್ಷಾ ಹಾರಾಟವನ್ನು ಅಕ್ಟೋಬರ್ 21 ರಂದು ಶ್ರೀಹರಿಕೋಟಾದ ಎಸ್ಡಿಎಸ್ಸಿ-ಎಸ್ಎಚ್ಎಆರ್ನಿಂದ ಬೆಳಿಗ್ಗೆ 7 ರಿಂದ 9 ರವರೆಗೆ ನಿಗದಿಪಡಿಸಲಾಗಿದೆ. ಮಾನವಸಹಿತ ಗಗನಯಾನ ಯೋಜನೆಯ ಪರೀಕ್ಷಾರ್ಥ ಪ್ರಯೋಗವನ್ನು ನಡೆಸುವುದಾಗಿ ಇಸ್ರೋ ಇಂದು ಪ್ರಕಟಿಸಿದೆ. ಇದರಲ್ಲಿ ಮೂವರು ಗಗನಯಾತ್ರಿಗಳು ಹಾರಾಟ ನಡೆಸಲಿದ್ದಾರೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ನೀಡಿದೆ.
ಗಗನಯಾನದಲ್ಲಿ 3 ಸದಸ್ಯರ ತಂಡವನ್ನು 400 ಕಿಮೀ ಮೇಲಿನ ಭೂಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ. ಭಾರತ ತನ್ನ ಈ ಉದ್ದೇಶದಲ್ಲಿ ಯಶಸ್ವಿಯಾದರೆ ಅದನ್ನು ಮಾಡಿದ ನಾಲ್ಕನೇ ರಾಷ್ಟ್ರವಾಗಲಿದೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…