ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ಇಸ್ರೋ ಮಾಹಿತಿ ನೀಡಿದೆ. ಚಂದ್ರಯಾನ, ಸೂರ್ಯಯಾನ ಯೋಜನೆಗಳ ಯಶಸ್ಸಿನ ಮೂಲಕ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಮತ್ತೊಂದು ಮಹತ್ವದ ಯೋಜನೆಗೆ ಸಜ್ಜಾಗುತ್ತಿದೆ.
ಟಿವಿ-ಡಿ1 ಪರೀಕ್ಷಾ ಹಾರಾಟವನ್ನು ಅಕ್ಟೋಬರ್ 21 ರಂದು ಶ್ರೀಹರಿಕೋಟಾದ ಎಸ್ಡಿಎಸ್ಸಿ-ಎಸ್ಎಚ್ಎಆರ್ನಿಂದ ಬೆಳಿಗ್ಗೆ 7 ರಿಂದ 9 ರವರೆಗೆ ನಿಗದಿಪಡಿಸಲಾಗಿದೆ. ಮಾನವಸಹಿತ ಗಗನಯಾನ ಯೋಜನೆಯ ಪರೀಕ್ಷಾರ್ಥ ಪ್ರಯೋಗವನ್ನು ನಡೆಸುವುದಾಗಿ ಇಸ್ರೋ ಇಂದು ಪ್ರಕಟಿಸಿದೆ. ಇದರಲ್ಲಿ ಮೂವರು ಗಗನಯಾತ್ರಿಗಳು ಹಾರಾಟ ನಡೆಸಲಿದ್ದಾರೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ನೀಡಿದೆ.
ಗಗನಯಾನದಲ್ಲಿ 3 ಸದಸ್ಯರ ತಂಡವನ್ನು 400 ಕಿಮೀ ಮೇಲಿನ ಭೂಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ. ಭಾರತ ತನ್ನ ಈ ಉದ್ದೇಶದಲ್ಲಿ ಯಶಸ್ವಿಯಾದರೆ ಅದನ್ನು ಮಾಡಿದ ನಾಲ್ಕನೇ ರಾಷ್ಟ್ರವಾಗಲಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…