ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ಇಸ್ರೋ ಮಾಹಿತಿ ನೀಡಿದೆ. ಚಂದ್ರಯಾನ, ಸೂರ್ಯಯಾನ ಯೋಜನೆಗಳ ಯಶಸ್ಸಿನ ಮೂಲಕ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಮತ್ತೊಂದು ಮಹತ್ವದ ಯೋಜನೆಗೆ ಸಜ್ಜಾಗುತ್ತಿದೆ.
ಟಿವಿ-ಡಿ1 ಪರೀಕ್ಷಾ ಹಾರಾಟವನ್ನು ಅಕ್ಟೋಬರ್ 21 ರಂದು ಶ್ರೀಹರಿಕೋಟಾದ ಎಸ್ಡಿಎಸ್ಸಿ-ಎಸ್ಎಚ್ಎಆರ್ನಿಂದ ಬೆಳಿಗ್ಗೆ 7 ರಿಂದ 9 ರವರೆಗೆ ನಿಗದಿಪಡಿಸಲಾಗಿದೆ. ಮಾನವಸಹಿತ ಗಗನಯಾನ ಯೋಜನೆಯ ಪರೀಕ್ಷಾರ್ಥ ಪ್ರಯೋಗವನ್ನು ನಡೆಸುವುದಾಗಿ ಇಸ್ರೋ ಇಂದು ಪ್ರಕಟಿಸಿದೆ. ಇದರಲ್ಲಿ ಮೂವರು ಗಗನಯಾತ್ರಿಗಳು ಹಾರಾಟ ನಡೆಸಲಿದ್ದಾರೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ನೀಡಿದೆ.
ಗಗನಯಾನದಲ್ಲಿ 3 ಸದಸ್ಯರ ತಂಡವನ್ನು 400 ಕಿಮೀ ಮೇಲಿನ ಭೂಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ. ಭಾರತ ತನ್ನ ಈ ಉದ್ದೇಶದಲ್ಲಿ ಯಶಸ್ವಿಯಾದರೆ ಅದನ್ನು ಮಾಡಿದ ನಾಲ್ಕನೇ ರಾಷ್ಟ್ರವಾಗಲಿದೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…